Advertisement

ಪಕ್ಷ ಸಂಘಟನೆಗೆ ಶ್ರಮ: ಪ್ರತಾಪ ಸಿಂಹ

09:24 AM Aug 02, 2020 | Suhan S |

ಮೈಸೂರು: ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ದುಡಿಯುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

Advertisement

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾದ ಬಳಿಕ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದ ಸಂದರ್ಭ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಈ ಹಿಂದೆ ನನಗೆ ಪಕ್ಷ ಯುವ ಮೋರ್ಚಾದಲ್ಲಿ ಜವಾಬ್ದಾರಿ ನೀಡಲಾಗಿತ್ತು. ಈಗ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದರು.ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ವಾದ ಸಂಸದ ಪ್ರತಾಪ್‌ ಸಿಂಹ, ಎಂ. ರಾಜೇಂದ್ರ, ಮೈಸೂರು ಗ್ರಾಮಾಂತರ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ಸಿದ್ದರಾಜು ಅವರನ್ನು ಅಭಿನಂದಿಸಲಾಯಿತು.

ಬಿಜೆಪಿ ಮುಖಂಡ ರವಿಶಂಕರ್‌, ಗಿರಿಧರ್‌, ಅರುಣ್‌ ಕುಮಾರ್‌ ಗೌಡ, ರಮೇಶ್‌, ಶಿವಕುಮಾರ್‌, ರಘು, ಇಲವಾಲ ರವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next