Advertisement

ಬಾಲ್ಯವಿವಾಹ ತಡೆಗೆ ಶ್ರಮಿಸಿ: ವಾಸುದೇವ

10:51 AM Aug 07, 2020 | Suhan S |

ಶಿಡ್ಲಘಟ್ಟ: ಬಾಲ್ಯವಿವಾಹ ಪದ್ಧತಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿದೆ ಮತ್ತು ಅವರ ಸುಮಧುರ ಬಾಲ್ಯದ ಬದು ಕನ್ನು ಕತ್ತಲಾಗಿಸುವ ಕೆಟ್ಟ ಆಚಾರ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯ ವಾಸುದೇವ ಶರ್ಮಾ ಅಭಿಪ್ರಾಯಪಟ್ಟರು.

Advertisement

ತಾಲೂಕಿನ ವೈ.ಹುಣಸೇನಹಳ್ಳಿಯ ಸಮುದಾಯ ಭವನದ ಆವರಣದಲ್ಲಿ ವಿವಾಹಿತ ಕಿಶೋರಿ ಹೆಣ್ಣುಮಕ್ಕಳ ಸಶಕ್ತೀಕರಣ ಯೋಜನೆಯಡಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಪಿಡಿಒ ಮತ್ತು ಸಮುದಾಯ ಸಂಘಟನೆಗಳೊಂದಿಗೆ ಚರ್ಚಿಸುವ ಹಾಗೂ ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಬಾಲ್ಯವಿವಾಹ ತಡೆಯಲು ಕಾರ್ಯತಂತ್ರಗಳ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಬಾಲ್ಯವಿವಾಹಗಳು, ತಾಯಿ ಮತ್ತು ಮಕ್ಕಳ ಮರಣ, ಅಪೌಷ್ಟಿಕತೆ, ಹೆಣ್ಣು ಮಕ್ಕಳ ಶೋಷಣೆ ಮುಂತಾದ ಅಂಶಗಳು ಹೆಚ್ಚಾಗಲು ಕಾರಣವಾಗುತ್ತಿವೆ. ಶಾಲಾ ಮುಖ್ಯ ಶಿಕ್ಷಕರು, ಪಿಡಿಒ, ಪೊಲೀಸ್‌, ಮುಂತಾದವರು ಬಾಲ್ಯವಿವಾಹ ತಡೆಯಲು ಶ್ರಮಿಸಬೇಕು ಎಂದರು. ಸಮುದಾಯದ ನಿಕಟ ಸಂಪರ್ಕ ಹೊಂದಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಧೈರ್ಯದಿಂದ ಮಕ್ಕಳ ಹಕ್ಕುಗಳ ರಕ್ಷಣಾ ಅಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ 1098 ಗೆ ದೂರು ಸಲ್ಲಿಸಬೇಕೆಂದರು.

ಗ್ರಾಪಂ ಅಧ್ಯಕ್ಷ ರಾಮ್‌ಪ್ರಸಾದ್‌ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾನೂನು ಉಲ್ಲಂಘನೆ ಮಾಡಿದವರಿಗೆ ಯಾವ ರೀತಿ ಶಿಕ್ಷೆಯನ್ನು ನೀಡುತ್ತಾರೆ ಎಂಬ ಜಾಗೃತಿ ಹಳ್ಳಿ ಗಳಲ್ಲಿ ಪಂಚಾಯಿತಿ, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಮೂಡಿಸಬೇಕೆಂದು ಸಲಹೆ ನೀಡಿದರು. ವೈ. ಹುಣಸೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಷಣ್ಮುಗಂ ಬಾಲ್ಯ ವಿವಾಹದಿಂದಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್‌, ಮೇಲ್ವಿಚಾರಕಿ ಬಿ.ಶಾಂತ ಇತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next