Advertisement

ಕಾಮಗಾರಿ ವೀಕ್ಷಿಸಿದಸಚಿವ ರೇವಣ್ಣ

03:58 PM Feb 05, 2018 | Team Udayavani |

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ರವಿವಾರ ನಗರಕ್ಕೆ ಆಗಮಿಸಿದ್ದ ಸಚಿವ ಎಚ್‌.ಎಂ. ರೇವಣ್ಣ ಅವರು ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು.

Advertisement

ರವಿವಾರ ಬೆಳಗ್ಗೆ ಅಮೃತ ಯೋಜನೆಯಡಿ ಮಂಜೂರಾದ 57 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ರಾಂಪುರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು. ರೈಲ್ವೆ ನಿಲ್ದಾಣ ಹತ್ತಿರದ ಇಂದಿರಾ ಕ್ಯಾಂಟಿನ್‌ ಕಾಮಗಾರಿ ವೀಕ್ಷಿಸಿದರು. ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜು, ಸಂಸದ ಬಿ.ವಿ.ನಾಯಕ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಅಭಿರಾಂ ಜಿ. ಶಂಕರ, ಎಸ್‌ಪಿ ಡಿ.ಕಿಶೋರಬಾಬು, ನಗರಸಭೆ ಉಪಾಧ್ಯಕ್ಷ ಜಯಣ್ಣ ಸೇರಿ
ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next