Advertisement

ಹೊಂದಾಣಿಕೆಯಿಂದ ಕೆಲಸ ಮಾಡಿ

02:26 PM Mar 30, 2019 | Team Udayavani |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಅವರು ಜಯನಗರದ 5ನೇ ಬ್ಲಾಕ್‌ನಲ್ಲಿ ತಮ್ಮ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿದರು.

Advertisement

ಬಳಿಕ ಪೂರ್ಣಿಮಾ ಕನ್ವೆನ್ಷನ್‌ ಸೆಂಟರ್‌ನಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಈ ವೇಳೆ ಚುನಾವಣೆಯಲ್ಲಿ ಎರಡೂ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್‌ ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯರೆಡ್ಡಿ, ಯು.ಬಿ.ವೆಂಕಟೇಶ್‌, ವೇಣುಗೋಪಾಲ್‌, ಮೇಯರ್‌ ಗಂಗಾಂಬಿಕೆ, ಮಾಜಿ ಮೇಯರ್‌ ಬಿ.ಎನ್‌.ಮಂಜುನಾಥ ರೆಡ್ಡಿ, ಮಾಜಿ ಆಡಳಿತ ಪಕ್ಷ ನಾಯಕ ರಿಜ್ವಾನ್‌ ಮಹಮದ್‌, ಸ್ಥಳೀಯ ಮುಖಂಡರಾದ ಕೃಷ್ಣಪ್ಪ ಭಾಗವಹಿಸಿದ್ದರು. ಇನ್ನು ಜೆಡಿಎಸ್‌ನಿಂದ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹಾಗೂ ಹಲವು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next