ಇದರ ಪರಿಣಾಮ ಬೇಸಿಗೆಯ ಬೇಗೆ ಜೊತೆಗೆ ಚರಂಡಿ ನೀರು ತುಂಬಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ನಗರವಿದೆ.
Advertisement
ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆಗಳನ್ನು ಮತ್ತು ಚರಂಡಿಗಳನ್ನು ದುರಸ್ತಿಗೊಳಿಸಿ ಹಾಗೂ ಹೊಸದಾಗಿ ನಿರ್ಮಿಸಲು ನಗರೋತ್ಥಾನ ಯೋಜನೆಯಲ್ಲಿ 4.27ಕೋಟಿ ರೂ.ಗಳ ಟೆಂಡರ್ ಬಿಡುಗಡೆಯಾಗಿ ಒಂದೂವರೆ ವರ್ಷ ಕಳೆದಿದೆ. ಕಾಮಗಾರಿ ಪೂರ್ಣಗೊಳ್ಳದೇ ಸ್ಥಗಿತಗೊಂಡಿದ್ದು ರಸ್ತೆಗಳು ಪೂರ್ಣಗೊಳ್ಳದೇ ಚರಂಡಿಗಳ ದುರಸ್ತಿಯೂ ಪ್ರಾಂಭವಾಗದೆ, ಚರಂಡಿ ಕೊಳಚೆ ನೀರು ತುಂಬಿ ರೋಗ ಭೀತಿಯಲ್ಲಿ ಜನತೆ ಜೀವನ ಸಾಗಿಸುವಂತಾಗಿದೆ.
Related Articles
Advertisement
ಪ್ರತಿವಾರ್ಡುಗಳಲ್ಲಿ ಚಂರಡಿ ಮತ್ತು ಸಿಮೆಂಟ್ ರಸ್ತೆಗಳಾಗಬೇಕು ಎಂಬ ಕಾರಣದಿಂದ ಎಲ್ಲಾ ಸದಸ್ಯರೂ ಸೇರಿ ಅನುಮೋದನೆ ನೀಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಗುತ್ತಿಗೆದಾರ ಅಪೂರ್ಣಕಾಮಗಾರಿ ಮಾಡಿ ನಾಪತ್ತೆಯಾಗಿದ್ದಾನೆ. ಅಧಿಕಾರಿಗಳು ಶಾಮೀಲಾಗಿರುವುದರಿಂದ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.-ಮಾರ್ಕೆಟ್ ಮೋಹನ್, ನಗರಸಭೆ ಮಾಜಿ ಸದಸ್ಯ ನಾನು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡು ಬಾರಿ ಗುತ್ತಿಗೆದಾರನಿಗೆ ನೋಟೀಸ್ ನೀಡಿ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಸೂಚಿಸಿದ್ದೇನೆ ಅದನ್ನೂ ಮೀರಿ ಗುತ್ತಿಗೆದಾರ ವಿಳಂಬ ಮಾಡಿದರೆ ದಂಡವಿಧಿಸುವ ಜೊತೆಗೆ ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಿಗೆ ವರದಿನೀಡಲಾಗುವುದು.
-ಉಮಾಕಾಂತ್, ಆಯುಕ್ತರು ನಗರಸಭೆ ಗೌರಿಬಿದನೂರು.