Advertisement

ಬಿಜೆಪಿ ಗೆಲುವಿಗೆ ಕಾರ್ಯಕರ್ತರ ಶ್ರಮ

01:19 PM Mar 25, 2019 | Lakshmi GovindaRaju |

ತಿ.ನರಸೀಪುರ: ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ಪ್ರಸಾದ್‌ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದು ಖಚಿತ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಎಚ್‌.ಎಂ.ಪರಶಿವಮೂರ್ತಿ ಹೇಳಿದರು.

Advertisement

ಪಟ್ಟಣದ ಬಸವಶ್ರೀ ಸ್ಟುಡಿಯೋದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೌಲ್ಯಯುತ ರಾಜಕಾರಣದೊಂದಿಗೆ ಜನಪರ ಹೋರಾಟ ಮಾಡಿಕೊಂಡು ಐದು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದೆ.

ಶ್ರೀನಿವಾಸ್‌ ಅವರು ಈ ಹಿಂದಿನ ಎನ್‌ಡಿಎ ಸರ್ಕಾರದ ಅವಧಿಯಲ್ಲೇ ಸಚಿವರಾಗಿ ಬಡವರ ಮತ್ತು ರೈತಪರ ಕೆಲಸ ಮಾಡಿದ್ದರು. ಕ್ಷೇತ್ರದ ಜನರಿಗೆ ಚಿರಪರಿಚಿತರಾಗಿರುವುದರಿಂದ ಈ ಬಾರಿ ಮತ್ತೆ ಲೋಕಸಭೆಗೆ ಆಯ್ಕೆಗೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.

ಬದ್ಧತೆಯಿಂದ ದುಡಿಯುತ್ತೇವೆ: ಲೋಕಸಭಾ ಚುನಾವಣೆ ಕೇಂದ್ರ ಹಾಗೂ ರಾಜ್ಯ ರಾಜಕಾರಣಕ್ಕೆ ಪ್ರತಿಷ್ಠೆಯಾಗಿರುವುದರಿಂದ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ ಪ್ರತಿಯೊಬ್ಬ ಮುಖಂಡ, ಕಾರ್ಯಕರ್ತರೂ ಹೆಚ್ಚಿನ ಕಾಳಜಿ ವಹಿಸಿ, ಸಂಘಟಿತರಾಗಿ ದುಡಿಯಲಿದ್ದಾರೆ.

ಕ್ಷೇತ್ರದಿಂದ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಆಗಿದ್ದಂತಹ ಕಹಿ ಘಟನೆ ಮರೆತು ಎಲ್ಲರೂ ಒಂದಾಗಿ ಲೋಕ ಸಮರದಲ್ಲಿ ಬಿಜೆಪಿ ಗೆಲ್ಲಿಸಲಿಕ್ಕೆ ಬದ್ಧತೆಯಿಂದ ದುಡಿಯುತ್ತೇವೆಂದರು.

Advertisement

ಸಜ್ಜಾಗಿದ್ದಾರೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕರೋಹಟ್ಟಿ ಮಹದೇವಯ್ಯ ಮಾತನಾಡಿ, ದಲಿತರ ಹಿರಿಯ ನಾಯಕರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಬಿಜೆಪಿಗೆ ದಲಿತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿವೆ. ಶ್ರೀನಿವಾಸ್‌ ಪ್ರಸಾದ್‌ ಅವರು ಅಭ್ಯರ್ಥಿ ಎಂದು ಘೋಷಣೆಯಾದ ಕೂಡಲೇ ಬೂತ್‌ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸೋಸಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಪರಶಿವಮೂರ್ತಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಬಸವರಾಜು, ಸಾಮಾಜಿಕ ಜಾಲತಾಣ ಸಂಚಾಲಕ ದಯಾನಂದ ಪಟೇಲ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next