Advertisement

ಕಾರ್ಮಿಕರ ನಿಧಿ: ವಿಚಾರಣೆ ಮುಂದಕ್ಕೆ

06:54 AM Jun 14, 2020 | Lakshmi GovindaRaj |

ಬೆಂಗಳೂರು: ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹ ಹಾಗೂ ಅದರ ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ 2018ರಲ್ಲಿ ನೀಡಿರುವ ತೀರ್ಪಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು  ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ “ಕಟ್ಟಡ ಹಾಗೂ ಇತರ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ’ಯಿಂದ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರ ನಿರ್ದೇಶನ  ನೀಡಬೇಕು ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯ ರಮೇಶ್‌ ಬಾಬು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಈ  ಮಾಹಿತಿ ನೀಡಿದೆ.

ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು, ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹ ಹಾಗೂ ಅದರ ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ 2018ರಲ್ಲಿ ಸುಪ್ರೀಂಕೋರ್ಟ್‌  ನೀಡಿರುವ ತೀರ್ಪಿನಂತೆ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೆಮೋ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಈ ಮೆಮೋ ಹಾಗೂ ಸುಪ್ರೀಂಕೋರ್ಟ್‌ ತೀರ್ಪು ಪಾಲಿಸಿರುವ ಬಗ್ಗೆ ಸಲ್ಲಿಸಲಾಗಿರುವ  ಪೂರಕ ದಾಖಲೆಗಳ ಪ್ರತಿಗಳನ್ನು ಅರ್ಜಿದಾರರಿಗೆ ಪೂರೈಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next