Advertisement

ಕಾರ್ಮಿಕರ ಹಕ್ಕು ಹತ್ತಿಕ್ಕುವ ಕೆಲಸ: ಎಚ್‌ಕೆಪಿ

12:23 AM May 02, 2019 | Team Udayavani |

ಬೆಂಗಳೂರು: ಕಳೆದ ಐದು ವರ್ಷದಲ್ಲಿ ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕೆಲಸ ಮಾಡಿದೆ. ಇದರಿಂದ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಿದ್ದ ಅನೇಕ ಸವಲತ್ತುಗಳಿಂದ ಕಾರ್ಮಿಕರು ವಂಚಿತರಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

Advertisement

ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾಂಗ್ರೆಸ್‌ ಕಾರ್ಮಿಕ ಘಟಕದ ವತಿಯಿಂದ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಕಾರ್ಮಿಕ ಸಂಘಟನೆಗಳನ್ನು ಒಡೆದು ಕಾರ್ಮಿಕ ಶಕ್ತಿಯನ್ನು ಸಂಪೂರ್ಣವಾಗಿ ದಮನ ಮಾಡುವ ಕಾರ್ಯವನ್ನು ಮಾಡಿದೆ ಎಂದು ಹೇಳಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಾರ್ಮಿಕರ ಒಳಿತಿಗಾಗಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಕಾಯ್ದೆ ಜಾರಿಗೆ ತಂದಿದ್ದರು. ಇದರಿಂದ ಸಾಕಷ್ಟು ಕಾರ್ಮಿಕರಿಗೆ ಅನುಕೂಲವಾಯಿತು. ಇದರ ಹೊರತಾಗಿಯೂ ಸರ್ಕಾರ ಸಾಕಷ್ಟು ಕಾರ್ಮಿಕ ಹಿತ ಕಾಪಾಡುವ ಕಾರ್ಯಕ್ರಮ ಜಾರಿಗೆ ತಂದಿತ್ತು ಎಂದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next