Advertisement

ಕಾರ್ಮಿಕರಿಗೂ ಸಿಗಲಿದೆ ಆರೋಗ್ಯ ಅಭಯ

09:31 PM Mar 05, 2020 | Lakshmi GovindaRaj |

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಕೃಷಿಕರಿಗೆ ಮಾತ್ರವಲ್ಲದೇ ಕಾರ್ಮಿಕ ವರ್ಗಕ್ಕೂ ಬಂಪರ್‌ ಕೊಡುಗೆ ಘೋಷಿಸಿದ್ದಾರೆ. ಕಾರ್ಮಿಕರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ ಹೆಲ್ತ್‌ ಕಾರ್ಡ್‌’ನ ಅಭಯ ನೀಡಿದ್ದಾರೆ.

Advertisement

ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆಯಡಿ ಯಲ್ಲಿ 1 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ ಹೆಲ್ತ್‌ ಕಾರ್ಡ್‌’ ವಿತರಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ಗಾರ್ಮೆಂಟ್‌ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1 ಲಕ್ಷ ಮಹಿಳಾ ಕಾರ್ಮಿಕರಿಗೆ “ವನಿತಾ ಸಂಗಾತಿ’ ಯೋಜನೆಯಡಿ ಉಚಿತ ಬಿಎಂಟಿಸಿ ಮಾಸಿಕ ಬಸ್‌ಪಾಸ್‌ ವಿತರಣೆಗೆ 25 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗೆ 10 ಮೊಬೈಲ್‌ ಕ್ಲಿನಿಕ್‌ ಪ್ರಾರಂಭಿಸಲು ಸರ್ಕಾರ ಮುಂದಾಗಿದ್ದು, ಕಾರ್ಮಿಕರ ಹಿತ ಕಾಯಲು ಮತ್ತು ಸುರಕ್ಷತೆಗೆ ಬಜೆಟ್‌ನಲ್ಲಿ ಪೂರಕ ಯೋಜನೆಗಳನ್ನು ಪ್ರಕಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next