Advertisement

ವಿಶ್ವ ಭಯೋತ್ಪಾದನಾ ವಿರೋಧಿ ದಿನಾಚರಣೆ

09:21 AM May 22, 2019 | Team Udayavani |

ಹಾಸನ: ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶ್ವ ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಮಂಗಳ ವಾರ ಆಚರಿಸಲಾಯಿತು.

Advertisement

ಜಿಲ್ಲಾಧಿಕಾರಿ ಕಚೇರಿ ಸಹಾಯಕ‌ ತಿಮ್ಮಪ್ಪ ಅವರು ಭಯೋತ್ಪಾದನೆ ವಿರುದ್ಧದ ಸಂದೇಶ ಸಾರುವ ಪ್ರತಿಜ್ಞಾವಿಧಿ ಬೋಧಿಸಿದರು.

ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿ ಸುತ್ತೇವೆ ಎಂದು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.

ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ಸಭೆಯಲ್ಲಿ ಹಾಜರಿದ್ದ ಅಧಿಕಾರಿ, ಸಿಬ್ಬಂದಿ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next