Advertisement

ವಿಶ್ವ ರಕ್ತ ದಾನಿಗಳ ದಿನಾಚರಣೆ

07:22 PM Jun 28, 2019 | Sriram |

ಸೋಮವಾರಪೇಟೆ: ತಥಾಸ್ತು ಸಾತ್ವಿಕ ಸಂಸ್ಥೆ ಆಶ್ರಯದಲ್ಲಿ, ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್‌ ಚಾಲನೆ ನೀಡಿ ಅವರು ಮಾತನಾಡಿದರು.

Advertisement

ಆರೋಗ್ಯವಂತ ಜನರು ಮೂರು ತಿಂಗಳಿಗೊಮ್ಮೆ ರಕ್ತ ದಾನ ಮಾಡುವುದರಿಂದ ಮತ್ತೂಂದು ಜೀವ ಉಳಿಸುವ ಕಾರ್ಯವಾಗುವುದು. ಈ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕೆಂದು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಮೂರ್ತಿ ಹೇಳಿದರು

ಪ್ರಪಂಚದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರೆದರೂ, ಇಂದಿಗೂ ಕೃತಕ ರಕ್ತದ ಉತ್ಪಾದನೆ ಸಾಧ್ಯವಾಗಿಲ್ಲ. ಕೆಲವು ತುರ್ತು ಸಮಯದಲ್ಲಿ ರಕ್ತದ ಕೊರತೆಯಿಂದ ಸಾಕಷ್ಟು ಜೀವ ಹಾನಿಯಾಗುತ್ತಿದೆ. ಆದುದ್ದರಿಂದ ಜನರು ರಕ್ತದಾನದ ಮೂಲಕ ಸಮಸ್ಯೆ ಪರಿಹರಿಸಬೇಕೆಂದರು.

ರಕ್ತ ನಿಧಿ ಕೇಂದ್ರದ ವೈದ್ಯರಾದ ಕರುಂಬಯ್ಯ ಮಾತನಾಡಿ, ನಿಗದಿತ ಸಮಯದಲ್ಲಿ ಎಲ್ಲರೂ ರಕ್ತ ದಾನ ಮಾಡಬಹುದು. ಇದು ನಮ್ಮ ಆರೋಗ್ಯ ಸುಧಾರಣೆಯೊಂದಿಗೆ ಮತ್ತೂಂದು ಜೀವ ಉಳಿಸಲು ಸಹಕಾರಿಯಾಗಿದೆ. ಸಂಘ ಸಂಸ್ಥೆಗಳು ರಕ್ತ ಸಂಗ್ರಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಕ್ತ ಸಂಗ್ರಹಕ್ಕೆ ಮುಂದಾಗಿರುವುದು ಉತ್ತಮ ಕಾರ್ಯ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಕಾನೂನು ಸಲಹೆಗಾರರಾದ ರೂಪಾ ಕಾಳಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next