Advertisement

ಬಾಲಕಾರ್ಮಿಕರ ಪದ್ಧತಿ ತಡೆಗೆ ಸಹಕರಿಸಿ

03:02 PM Jun 13, 2022 | Team Udayavani |

ದೇವನಹಳ್ಳಿ: ದೇಶದಲ್ಲಿ ಬಾಲಕಾರ್ಮಿಕ ಮತ್ತು ಜೀತ ಪದ್ಧತಿ ಇಂದಿಗೂ ಜೀವಂತವಾಗಿರಲು ಬಡತನ ಹಾಗೂ ಶಿಕ್ಷಣ ಸಮಾಜದ ಭದ್ರತೆಯ ಕೊರತೆಯೇ ಕಾರಣ ಎಂದು ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಬಿರಾದಾರ ದೇವಿಂದ್ರಪ್ಪ ತಿಳಿಸಿದರು.

Advertisement

ಪಟ್ಟಣದ ಗಿರಿಯಮ್ಮ ವೃತ್ತದ ಡಾ.ಬಿ.ಆರ್‌.ಅಂಬೇ ಡ್ಕರ್‌ ಭವನದಲ್ಲಿ ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯ ದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಆಸೆ ಅವರಿಗೂ ಇರುತ್ತದೆ. ಆದರೆ, ಬಡತನದಿಂದ ಮಕ್ಕಳ ದುಡಿಮೆ ಯಿಂದ ಪೋಷಣೆ ಮಾಡಬೇಕಾಗಿರುವ ಕಾರಣ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಪರಿಪಾಠ ಇದೆ ಎಂದರು.

14ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳ ಬಾರದು. ಹಾಗೇನಾದರೂ ಮಕ್ಕಳನ್ನು ಕೆಲಸಕ್ಕೆ ಸೇರಿಸಿದ್ದರೆ ಅದು ಅಪರಾಧವಾಗುತ್ತದೆ. ಅಪರಾಧ ಸಾಬೀತಾ ದಲ್ಲಿ 50 ಸಾವಿರ ರೂ. ದಂಡ ಮತ್ತು 2 ವರ್ಷ ಜೈಲು ಶಿಕ್ಷೆ ಇರುತ್ತದೆ. ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡವರನ್ನು ಕಂಡರೆ ಸಾರ್ವಜನಿಕರು 1098ಗೆ ಕರೆ ಮಾಡಬಹುದು. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಾರೆ. ಮಕ್ಕಳಿಗೆ ಶಿಕ್ಷಣ ನೀಡಿ, ಸಮಾಜದಲ್ಲಿ ಅವರ ಗುರಿ ಸಾಧಿಸಲು ಪ್ರತಿಯೊ ಬ್ಬರ ಜವಾಬ್ದಾರಿ ಎಂದು ಹೇಳಿದರು.

ಮೊದಲು ಶಿಕ್ಷಣ ನೀಡಿ: ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ರಾಮುಮಲ್ಲಯ್ಯ ಮಾತನಾಡಿ, ಮಕ್ಕಳಿಗೆ ಮೊದಲು ಶಿಕ್ಷಣ ನೀಡುವಂತಾಗಬೇಕು. ಮಕ್ಕಳನ್ನು ಕಾರ್ಮಿಕರನ್ನಾಗಿ ಮಾಡುವುದು ಅನಿಷ್ಟ ಪದ್ಧತಿ ಯಾಗಿದೆ. ಈ ದೇಶದಲ್ಲಿ ಸಾಮಾನ್ಯವಾಗಿ ಎಲ್ಲಾ ನಾಗರಿ ಕರು ಜವಾಬ್ದಾರಿಯನ್ನು ತೆಗೆದುಕೊಂಡು ಅನಿಷ್ಟ ಪದ್ಧತಿಯನ್ನು ತೊಲಗಿಸಬೇಕೆ ವಿನಃ ಕೇವಲ ಅಧಿಕಾರಿಗಳಿಂದ ಸಾಧ್ಯವಿಲ್ಲ. ಮಕ್ಕಳಿಗೆ ವಿದ್ಯಾವಂತರನ್ನಾಗಿ ಮಾಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗುತ್ತಾರೆ ಎಂದು ಹೇಳಿದರು.

ಮಾಲೀಕರನ್ನು ಕರೆಸಿ ಮಾಹಿತಿ ನೀಡಿ: ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ.ಕೆ. ಮಧುಸೂಧನ್‌ ಮಾತನಾಡಿ, ಕೆಲವು ಅಧಿಕಾರಿಗಳು ತಮ್ಮನ್ನು ಕೇಳಿ ಕೆಲವರು ಹೊರಟಿದ್ದಾರೆ. ಇನ್ನು ಕೆಲವರು ಮೊಬೈಲ್‌ ನೋಡುತ್ತಿದ್ದಾರೆ. ಅಧಿಕಾರಿಗಳು ಇಂತಹ ಸಭೆ ಮಾಡುವಾಗ ಬಾಲಕಾರ್ಮಿಕ ಪದ್ಧತಿಗೆ ಸಂಬಂಧಿಸಿದಂತೆ ಹೋಟೆಲ್‌ ಮಾಲೀಕರು, ಬೇಕರಿ ಮಾಲೀಕರು, ಗ್ಯಾರೇಜ್‌ ಅಂಗಡಿಗಳ ಮಾಲೀಕರು, ಅಪಾರ್ಟ್‌ಮೆಂಟ್‌ ಮಾಲೀಕರನ್ನು ಕರೆಸಿ ಅವರಿಗೆ ಬಾಲ ಕಾರ್ಮಿಕ ಪದ್ಧತಿ ಸಂಬಂಧಪಟ್ಟಂತೆ ಮಾಹಿತಿ ನೀಡಬೇಕು ಎಂದರು.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್‌.ಶ್ರೀಕಂಠ, ಕಾರ್ಮಿಕ ಜಿಲ್ಲಾಮಟ್ಟದ ಅಧಿಕಾರಿ ನಾಗೇಂದ್ರ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಸುಬಾರಾವ್‌.ಎಸ್‌, ಜಿಲ್ಲಾ ದಿವ್ಯಾಂಗ ಕಲ್ಯಾಣಾಧಿಕಾರಿ ಜಗ ದೀಶ್‌, ಕಾರ್ಮಿಕ ಇಲಾಖೆ ತಾಲೂಕು ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಪುರಸಭೆ ಮುಖ್ಯಾಧಿಕಾರಿ ಎ. ಎಚ್‌.ನಾಗರಾಜ್‌, ಎನ್‌ಸಿಸಿ ವಿದ್ಯಾರ್ಥಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.

ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಲಿ : ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಸಹಕಾರ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಿಸಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು. ಸಂವಿಧಾನ, ಸರ್ಕಾರ ಅನೇಕ ಕಾಯ್ದೆ, ಕಾನೂನು ಜಾರಿಗೊಳಿಸುವುದರ ಮೂಲಕ ಬಾಲಕ ಕಾರ್ಮಿಕ ವಿರೋಧಿ ಪದ್ಧತಿ ಮೂಲಕ ಜಾಗೃತಿ ಮೂಡಿಸುತ್ತಿದೆ. ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬೇಕು. ಇಂತಹ ಅನಿಷ್ಟ ಪದ್ಧತಿ ತೊಲಗಿಸಬೇಕು ಎಂದು ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಬಿರಾದಾರ ದೇವಿಂದ್ರಪ್ಪ ಹೇಳಿದರು.

ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯ ಆಗಿರುತ್ತದೆ ಎಂದು ತಹಶೀಲ್ದಾರ್‌ ಶಿವರಾಜ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next