Advertisement

ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ವೀಕ್ಷಣೆ ಪ್ರವಾಸಿಗರಿಗೆ ಕಷ್ಟ ಕಷ್ಟ

06:34 PM Jul 02, 2021 | Team Udayavani |

ಪಣಜಿ: ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ವೀಕ್ಷಣೆ ಸದ್ಯ ಪ್ರವಾಸಿಗರ ಪಾಲಿಗೆ ಕೈಗೆಟುಕದ ದ್ರಾಕ್ಷಿಯಂತಾಗಿದೆ. ಗೋವಾ ಪ್ರವಾಸೋದ್ಯಮ ಆರಂಭಗೊಳ್ಳದಿದ್ದರೂ ಕೂಡ ಕೆಲ ಪ್ರವಾಸಿಗರು ರೈಲು ಅಥವಾ ಬೈಕ್ ಮೂಲಕ ಆಗಮಿಸಿ ಕ್ಯಾಸಲ್‍ರಾಕ್ ನಿಲ್ದಾಣದಿಂದ 13 ಕಿ.ಮಿ ಕಾಲ್ನಡಿಗೆಯಲ್ಲಿ ದೂಧಸಾಗರ ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.

Advertisement

ಗೋವಾ-ಕರ್ನಾಟಕ ಗಡಿ ಭಾಗದಲ್ಲಿರುವ ದೂಧಸಾಗರ ಜಲಪಾತವು ಪ್ರವಾಸಿಗರ ವಿಶೇಷ ಆಕರ್ಷಣೆಯ ಪ್ರವಾಸಿ ತಾಣವಾಗಿದೆ. ಆದರೆ ಕಳೆದ ಕೆಲ ವರ್ಷಗಳ ಹಿಂದೆ ಈ ಜಲಪಾತದಲ್ಲಿ ಬಿದ್ದು ಸಾವನ್ನಪ್ಪುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಗೋವಾ ಸರ್ಕಾರವು ಇಲ್ಲಿ ಕಠಿಣ ನಿರ್ಬಂಧ ಹೇರಿತ್ತು. ಆದರೆ ಇದೀಗ ದೇಶಾದ್ಯಂತ ಲಾಕ್‍ಡೌನ್ ಜಾರಿಯ ನಂತರ ಪ್ರವಾಸಿಗರಿಗೆ ದೂಧಸಾಗರ ಜಲಪಾತ ವೀಕ್ಷಣೆ ಅಸಾಧ್ಯ ಎಂಬಂತಾಗಿದೆ. ಹೀಗಿದ್ದರೂ ಕೂಡ ಕೆಲ ಪ್ರವಾಸಿಗರು ಕ್ಯಾಸಲ್‍ರಾಕ್ ರೈಲ್ವೆ ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ ಆಗಮಿಸಿ ದೂಧಸಾಗರ ಜಲಪಾತ ವೀಕ್ಷಿಸುತ್ತಿದ್ದಾರೆ.

ಕಳೆದ ವರ್ಷವೂ ಕೂಡ ಕೋವಿಡ್ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ದೂಧಸಾಗರ ಜಲಪಾತ ವೀಕ್ಷಣೆಗೆ ಅವಕಾಶ ಲಭಿಸಿರಲಿಲ್ಲ. ಆದರೆ ಪ್ರಸಕ್ತ ಲಾಕ್‍ಡೌನ್ ಸಡಿಲಿಕೆಯ ನಂತರ ಗೋವಾ-ಕರ್ನಾಟಕ ಗಡಿಯಲ್ಲಿ ಕೋವಿಡ್ ತಪಾಸಣೆ ಖಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೇರವಾಗಿ ದೂಧಸಾಗರ ಜಲಪಾತ ವೀಕ್ಷಣೆಯ ಭಾಗ್ಯ ಇನ್ನೂ ಲಭಿಸಿಲ್ಲ. ಕ್ಯಾಸಲ್‍ರಾಕ್‍ನಿಂದ ಸುಮಾರು 13 ಕಿ.ಮಿ ಕಾಲ್ನಡಿಗೆಯಲ್ಲಿ ಆಗಮಿಸಿ ಕೆಲ ಪ್ರವಾಸಿಗರು ದೂಧಸಾಗರ ಜಲಪಾತ ವೀಕ್ಷಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next