Advertisement

ವಿಶ್ವ ಅರಣ್ಯ ದಿನಾಚರಣೆ

11:01 PM Mar 27, 2019 | sudhir |

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೆàದ ಕಾಲೇಜು, ಆಸ್ಪತ್ರೆಯ ದ್ರವ್ಯಗುಣ ಸ್ನಾತಕೋತ್ತರ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಭಾಗಿತ್ವದಲ್ಲಿ ವಿಶ್ವ ಅರಣ್ಯ ದಿನಾಚರಣೆ ಮಾ.21ರಂದು ಔಷಧಿ ಸಸ್ಯೋದ್ಯಾನ ರಾಜವನದಲ್ಲಿ ಆಚರಿಸಲಾಯಿತು.

Advertisement

ಸಂಪನ್ಮೂಲ ವ್ಯಕ್ತಿಗಳಾಗಿ ಶಾಲಕ್ಯತಂತ್ರ ವಿಭಾಗದ ಮುಖ್ಯಸ್ಥ ಡಾ| ಕೆ. ರಾಮಚಂದ್ರ ಭಾಗವಹಿಸಿ ಇಂದಿನ ಜೀವನ ಶೈಲಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಎಸ್‌.ಡಿ.ಎಂ. ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಸುಮಾ ಮಲ್ಯ ಶೈಕ್ಷಣಿಕ ಕ್ಷೇತ್ರ ಹಾಗೂ ಅರಣ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಅರಣ್ಯ ಸಂರಕ್ಷಣೆಯ ಜವಾಬ್ದಾರಿ ಮತ್ತು ಅದರ ನಿರ್ವಹಣೆ ಬಗ್ಗೆ ವಿವರಿಸಿದರು.

ಕಾಲೇಜಿನ ಉದ್ಯಾನವನದ ಸಸ್ಯಗಳಿಗೆ ನಾಮಫ‌ಲಕ ಬಿಡುಗಡೆಗೊಳಿಸಲಾಯಿತು. ಬೇಸಗೆಯಲ್ಲಿ ಗಿಡಮರಗಳಿಗೆ ನೀರುಣಿಸುವ ಯೋಜನೆ ಉದ್ಘಾಟಿಸಲಾಯಿತು. ಉಪನ್ಯಾಸಕರಾದ ಡಾ| ರಮಾದೇವಿ, ಡಾ| ಮೊಹಮ್ಮದ್‌ ಫೈಸಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಾಧ್ಯಾಪಕಿ ಡಾ| ನಿವೇದಿತಾ ಶೆಟ್ಟಿ ಸ್ವಾಗತಿಸಿದರು. ಡಾ| ತೇಜಸ್ವಿ ನಾಯ್ಕ ವಂದಿಸಿದರು. ವಿದ್ಯಾರ್ಥಿ ಡಾ| ಪಲ್ಲ ವಿ ಕಶ್ಯಪ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next