Advertisement

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

08:52 PM Apr 14, 2024 | Team Udayavani |

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಆನೆಗೊಂದಿಯ ನವವೃಂದಾವನಗಡ್ಡಿಯಲ್ಲಿ ಶ್ರೀಕವೀಂದ್ರತೀರ್ಥರ ಆರಾಧನಾ ಮಹೋತ್ಸವ ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಏ.17 ರಂದು ಮಧ್ಯಾಹ್ನ 1 ಗಂಟೆಯಿಂದ ಏ.18 ಸಂಜೆಯ ವರೆಗೆ ಮಂತ್ರಾಲಯಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಆನೆಗೊಂದಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕ ಸುಮಂತಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಶ್ರೀಕವೀಂದ್ರತೀರ್ಥರ ಮೂಲಬೃಂದಾವನಕ್ಕೆ ಮಹಾಪಂಚಾಮೃತಾಭಿಷೇಕ ವಿಶೇಷ ಪುಷ್ಪಾಲಂಕಾರ, ಸಂಸ್ಥಾನ ಪೂಜೆ ವಿದ್ವಾಂಸರ ಪ್ರವಚನ, ಅಲಂಕಾರ ಸಂತರ್ಪಣೆ ತೀರ್ಥಪ್ರಸಾದ ಮೊದಲಾದ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ.

ಶ್ರೀಮಠದ ಶಿಷ್ಯರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಪಾದಂಗಳವರ ಹಾಗೂ ನವವೃಂದಾವನಸ್ಥ ಸಮಸ್ತ ಯತಿಗಳ ಹಾಗೂ ಶ್ರೀಮನ್ಮೂಲರಾಮದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next