Advertisement

ಪೂಜೆ ವಿವಾದ; ಎರಡು ಬಣಗಳ ನಡುವೆ ಮಾರಾಮಾರಿ

07:04 AM Jun 06, 2019 | Team Udayavani |

ನಾಗಮಂಗಲ: ತಾಲೂಕಿನ ಮುಳುಕಟ್ಟೆ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಮುಳುಕಟ್ಟಮ್ಮ ದೇವಾಲಯದ ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಬುಧವಾರ ಮಾರಾಮಾರಿ ನಡೆದಿದ್ದು ಘಟನೆ ಸಂಬಂಧ ಮುಳುಕಟ್ಟೆ ಗ್ರಾಮದ 13 ಮಂದಿಯನ್ನು ಬಂಧಿಸಲಾಗಿದೆ.

Advertisement

ದೇವಾಲಯದ ಪೂಜೆ ಸಂಬಂಧ ಟ್ರಸ್ಟ್‌ ಎರಡು ಬಣಗಳನ್ನು ನೇಮಿಸಿತ್ತು. ಕಾರಣಾಂತರಗಳಿಂದ ಒಂದು ಬಣದವರು ಅನೇಕ ವರ್ಷಗಳಿಂದ ಪೂಜೆಯಿಂದ ಹೊರಗುಳಿದಿದ್ದರು. ಅದೇ ಬಣದವರು ಬುಧವಾರ ಬೆಳಗ್ಗೆ ಏಕಾಏಕಿ ದೇವಾಲಯಕ್ಕೆ ಬಂದು ಪೂಜೆ ವಿಚಾರ ಮಾತನಾಡಿದ್ದಾರೆ.

ಆಗ ವಾದ ವಿವಾದ ನಡೆದು ಎರಡು ಬಣಗಳ ನಡುವೆ ಮಾತಿ ಚಕಮಕಿ ತಾರಕಕ್ಕೇರಿ, ಕೈ ಕೈ ಮಿಲಾಯಿಸಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪೂಜೆಯಿಂದ ಹೊರಗುಳಿದಿದ್ದವರು ದೇವಾಲಯವನ್ನು ಒಳಗಿನಿಂದ ಬೀಗ ಹಾಕಿಕೊಂಡು ಮಾರಕಾಸ್ತ್ರಗಳಿಂದ ನಮ್ಮ ಹಲ್ಲೆ ಮಾಡಲು ಯತ್ನಿಸಿದರೆಂದು ದೇಗುಲದ ಅರ್ಚಕರು ಪೊಲೀಸ್‌ ಠಾಣೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾರೆಯಿಂದ ದೇವಾಲಯದ ಮುಖ್ಯದ್ವಾರ ಮುರಿದು ಒಳ ಹೋಗಿದ್ದಾರೆ. ಪೋಲೀಸರೊಂದಿಗೂ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆದು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಶಾಂತಗೊಳಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next