Advertisement

ವರುಣನ ಅವಕೃಪೆ: ಶ್ರೀಕ್ಷೇತ್ರ ಮಂಜುಗುಣಿಯಲ್ಲಿ ಪೂಜೆ

11:21 PM Aug 10, 2019 | Team Udayavani |

ಶಿರಸಿ: ರಾಜ್ಯದ ನಾನಾ ಭಾಗಗಳಲ್ಲಿ ವರುಣನ ಅವಕೃಪೆಯಿಂದ ಉಂಟಾಗುತ್ತಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ವಿಶೇಷ ಪ್ರಾರ್ಥನೆ-ಪೂಜೆ ಸಲ್ಲಿಸಲಾಯಿತು. ಉತ್ತರ ಕರ್ನಾಟಕ, ಕರಾವಳಿ, ಕೊಡಗು ಸೇರಿ ರಾಜ್ಯದ ವಿವಿಧೆಡೆ ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

Advertisement

ಜನಜೀವನ ಅಸ್ತವ್ಯಸ್ತಗೊಂಡಿದ್ದು ದಿಕ್ಕೇ ತೋಚದಂತಹ ಸನ್ನಿವೇಶ ಎದುರಾಗಿದೆ. ಹಲವು ಕಡೆ ಬರಗಾಲವಿದೆ. ಈ ಎಲ್ಲಾ ಪ್ರಕೃತಿ ಅಸಮತೋಲನ ಸರಿ ಮಾಡಿ, ಸುಖ-ಶಾಂತಿ-ನೆಮ್ಮದಿ ನೆಲೆಸಲೆಂದು ಪ್ರಧಾನ ಅರ್ಚಕ ಶ್ರೀನಿವಾಸ್‌ ಭಟ್‌ ನೇತೃತ್ವದಲ್ಲಿ ವೆಂಕಟೇಶನಿಗೆ ವಿಶೇಷ ಪ್ರಾರ್ಥನೆ-ಪೂಜೆ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next