Advertisement

ಬರ ಪರಿಹಾರಕ್ಕಾಗಿ ರಿಟ್‌ ಅರ್ಜಿ ರಾಜಕೀಯ ಪ್ರೇರಿತ: ಎಚ್‌ಡಿಡಿ

09:56 PM Mar 24, 2024 | Team Udayavani |

ಬೆಂಗಳೂರು: ಬರ ಪರಿಹಾರಕ್ಕಾಗಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

Advertisement

ಜೆಡಿಎಸ್‌ನ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಿಂದ ಹಣ ಬಂದಿಲ್ಲ ಎಂದು ರಿಟ್‌ ಪಿಟಿಷನ್‌ ಹಾಕಿರುವುದು ಇದೇ ಮೊದಲು. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಸಿದ್ದರಾಮಯ್ಯ ಇದ್ರು. ಆಗ ನಾವು ಊರೂರಿಗೆ ಗೋಶಾಲೆ ಮಾಡಿದ್ದೆವು. ಕೇಂದ್ರ ಸರಕಾರವನ್ನು ಬೇಡುತ್ತ ಕೂರಲಿಲ್ಲ. ರಿಟ್‌ ಹಾಕಿರುವುದು ರಾಜಕೀಯ ಪ್ರೇರಿತ. ಇದಕ್ಕಿಂತ ಬೇರೇನೂ ಹೇಳುವುದಿಲ್ಲ ಎಂದರು.

ಮೈತ್ರಿಯಲ್ಲಿ ಸಮಸ್ಯೆ ಇಲ್ಲ
ಬಿಜೆಪಿ ಜತೆ ಮೈತ್ರಿಯಲ್ಲಿ ನಮ್ಮದೇನೂ ಸಮಸ್ಯೆ ಇಲ್ಲ. ನಮಗೆ ಮೂರು ಸೀಟು ಕೊಟ್ಟಿದ್ದಾರೆ. ನನ್ನನ್ನು, ಕುಮಾರಸ್ವಾಮಿಯವರನ್ನು, ಜಿ.ಟಿ. ದೇವೇಗೌಡರನ್ನು ತಾರಾ ಪ್ರಚಾರಕರನ್ನಾಗಿ ಮಾಡಿದ್ದಾರೆ. ಅಳಿಯ ಮಂಜುನಾಥ್‌ ಅವರಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಹೇಳಿದರು. ಮಂಡ್ಯ ಅಭ್ಯರ್ಥಿ ವಿಚಾರ ಕೂತು ಚರ್ಚೆ ಮಾಡುತ್ತೇವೆ. ಎಚ್‌.ಡಿ. ಕುಮಾರಸ್ವಾಮಿ, ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಪುಟ್ಟರಾಜು ಸೇರಿ ನಮ್ಮ ಪಕ್ಷದ ಶಾಸಕರು, ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮಂಡ್ಯದಿಂದ ಸ್ಪರ್ಧಿಸಲು ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಮೇಲೆ ಒತ್ತಡವಿದೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next