Advertisement

ಅಕ್ರಮ ಆಸ್ತಿ ಸಂಪಾದಿಸಿದ್ದರೆ ಸರಕಾರಕ್ಕೆ ಬರೆದು ಕೊಡುವೆ; ಲಕ್ಷ್ಮೀ ಹೆಬ್ಬಾಳ್ಕರ್

09:40 AM Oct 04, 2019 | Nagendra Trasi |

ಬೆಳಗಾವಿ: ಚಾಮುಂಡೇಶ್ವರಿ ಮೇಲಾಣೆ ನಾನು ಯಾವುದೇ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ. ಒಂದು ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದರೆ ಅದನ್ನು ಸರಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Advertisement

ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಗಾಗಿದ್ದ ಹೆಬ್ಬಾಳ್ಕರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ನಾನು ಯಾವುದೇ ಅಕ್ರಮದಲ್ಲಿ ಪಾಲುದಾರಳಲ್ಲ. ಎಲ್ಲವನ್ನೂ ಕಾನೂನು ಬದ್ಧವಾಗಿಯೇ ಮಾಡಲಾಗಿದೆ ಎಂದರು.

ನಮ್ಮ ಆಸ್ತಿ ವಿಚಾರದಲ್ಲಿ ಊಹಾಪೋಹ ಹಬ್ಬಿಸಲಾಗುತ್ತಿದೆ. ಹರ್ಷ ಸಕ್ಕರೆ ಕಾರ್ಖಾನೆಯಲ್ಲೂ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next