Advertisement

ಪ್ರಧಾನಿಗೆ ಪತ್ರ ಬರೆದ ವಿ.ಪ.ಸದಸ್ಯ ಫ‌ರೂಕ್‌

11:26 PM Jan 03, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ನಾಯಕರ ಹೇಳಿಕೆ ಹಾಗೂ ಭಾಷಣಗಳಿಂದಾಗಿ ರಾಜ್ಯದ ಅಲ್ಪಸಂಖ್ಯಾತರಲ್ಲಿ ಆತಂಕದ ವಾತಾವರಣ ಮೂಡಿದೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫ‌ರೂಕ್‌ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಕೆಲವು ನೀತಿ, ನಿಯಮಗಳು ಜವಾಬ್ದಾರಿಯುತ ಸ್ಥಾನದಲ್ಲಿರುವವರ ಪ್ರಚೋದನಕಾರಿ ಹೇಳಿಕೆಗಳಿಂದ ಕರಾವಳಿ ಭಾಗ ಸೇರಿದಂತೆ ರಾಜ್ಯದೆಲ್ಲೆಡೆ ಅಲ್ಪಸಂಖ್ಯಾತರು ಒಂದು ರೀತಿಯಲ್ಲಿ ಭಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಯಾವುದೇ ಸಕಾರಣವಿಲ್ಲದೆ ವಾಪಸ್‌ ಪಡೆದಿರುವುದು ಸಮುದಾಯದಲ್ಲಿ ಬೇಸರ ಮೂಡಿಸಿದೆ. ಹೀಗಾಗಿ, ರಾಜ್ಯದ ಜನರು ಭಯ, ಆತಂಕ ಇಲ್ಲದೆ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸಿ ಎಂದು ಪ್ರಧಾನಿಯವರಿಗೆ ಮನವಿ ಮಾಡಿದ್ದು, ಹೊಸ ವರ್ಷದ ಶುಭಾಶಯಗಳನ್ನೂ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next