Advertisement

ಗಡಿ ಜಿಲ್ಲೆ ಬಿಡದ ಮಹಾ ನಂಟು

12:11 PM Jun 12, 2020 | Naveen |

ಯಾದಗಿರಿ: ಗಡಿ ಜಿಲ್ಲೆಗೆ ಮಹಾರಾಷ್ಟ್ರ ನಂಟಿನಿಂದ ಮಹಾಮಾರಿ ಕೋವಿಡ್ ಅಟ್ಟಹಾಸ ಇನ್ನೂ ಮುಂದುವರಿದಿದೆ. ಗುರುವಾರ 66 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 735ಕ್ಕೆ ಏರಿಕೆಯಾಗಿದೆ. ಇದರ ಜತೆಗೆ ಗುರುವಾರ 99 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆಶಾದಾಯಕ ಬೆಳವಣಿಗೆಯಾಗಿದೆ.

Advertisement

ಬುಧವಾರ 27 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಗುರುವಾರ 10 ವರ್ಷದೊಳಗಿನ 9 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ ಗುರುಮಠಕಲ್‌ ತಾಲೂಕಿನ ವಡವಟ್‌ ಒಂದೇ ಗ್ರಾಮದ ಐದು ಮಕ್ಕಳಿಗೆ ಕೋವಿಡ್ ವಕ್ಕರಿಸಿದ್ದು, 5 ವರ್ಷದ ಬಾಲಕಿ (ಪಿ-6059), 7 ವರ್ಷದ ಬಾಲಕಿ (ಪಿ-6054) ಮತ್ತು 5 ವರ್ಷದ ಬಾಲಕಿ (ಪಿ-6055) 9 ವರ್ಷದ ಬಾಲಕಿ (ಪಿ-6057), ತುರುಕನ್‌ದೊಡ್ಡಿಯ 6 ವರ್ಷದ ಬಾಲಕಿ (ಪಿ-6061) ಸೇರಿದಂತೆ 29 ಪುರುಷರು ಹಾಗೂ 37 ಮಹಿಳೆಯರಲ್ಲಿ ಕೋವಿಡ್ ಪಾಸಿಟಿವ್‌ ಪತ್ತೆಯಾಗಿದೆ.

99 ಜನರು ಗುಣಮುಖ: ಜಿಲ್ಲೆಯಲ್ಲಿ ಕೋವಿಡ್‌-19 ಖಚಿತಪಟ್ಟ 735 ವ್ಯಕ್ತಿಗಳ ಪೈಕಿ ಗುರುವಾರ 99 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜೂನ್‌ 11ರವರೆಗೆ ಒಟ್ಟು 218 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಉಳಿದ 536 ಪ್ರಕರಣಗಳು ಸಕ್ರಿಯವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.

ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಗುರುವಾರದ 210 ನೆಗೆಟಿವ್‌ ವರದಿ ಸೇರಿ ಈವರೆಗೆ 17,950 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 242 ಜನರ ಹೊಸ ಮಾದರಿ ಸೇರಿ 807 ಮಾದರಿಗಳ ವರದಿ ಬರಬೇಕಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 36 ಕಂಟೈನ್ಮೆಂಟ್‌ ಝೋನ್‌ ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 144 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 113 ಜನರನ್ನು, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 100 ಮತ್ತು ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 112 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 30 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 1505 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next