Advertisement

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

03:05 PM Jul 22, 2024 | Team Udayavani |

ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತ ರೆಡ್ಡಿ ಮುದ್ನಾಳ (76) ಅನಾರೋಗ್ಯದಿಂದ ಸೋಮವಾರ‌ ನಿಧನರಾಗಿದ್ದಾರೆ.

Advertisement

ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಇಂದು ಮಧ್ಯಾಹ್ನ ಯಾದಗಿರಿ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಯಾದಗಿರಿ ಶಾಸಕರಾಗಿದ್ದರು. 2010 ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು‌ ಜಿಲ್ಲೆಯ ರಾಜಕೀಯದಲ್ಲಿ ಅಜಾತಶತ್ರು ನಾಯಕರೆಂದೆ ಹೆಸರುವಾಸಿಯಾಗಿದ್ದರು.

ಯಾದಗಿರಿ ಜಿಲ್ಲೆ ರಚನೆಯಾಗಲು ಪ್ರಮುಖ ಪಾತ್ರ ವಹಿಸಿದ್ದ ಡಾ.ವೀರಬಸವಂತರಡ್ಡಿ ಮುದ್ನಾಳ ಅವರ ಅಗಲಿಕೆಯಿಂದ ಯಾದಗಿರಿ ಜನರಲ್ಲಿ ಅಪಾರ ನೋವುಂಟು ಮಾಡಿದೆ.

ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಬಿಜೆಪಿ ಪಕ್ಷದಲ್ಲಿ ಸಕ್ರಿಯ ರಾಜಕಾರಣ ತೊಡಗಿಸಿಕೊಂಡಿದ್ದರು. ಆದರೆ ತೀವ್ರ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ‌.

Advertisement

ಮೃತರು ಪತ್ನಿ ಸೇರಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಹಾಗೂ 4 ಜನ ಸಹೋದರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಮದ್ಯಾಹ್ನ 3 ಗಂಟೆಗೆ ಸ್ವಗ್ರಾಮ‌ ಮುದ್ನಾಳ್ ನ ತೋಟದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next