Advertisement

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!

08:07 PM Sep 23, 2024 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಯಾದಗಿರಿ ತಾಲೂಕಿನ ಜಿನಕೇರ ತಾಂಡಾದಲ್ಲಿ ನಡೆದಿದೆ.

Advertisement

ಯಾದಗಿರಿ ತಾಲೂಕಿನ ಜೀನಕೇರಾ ತಾಂಡಾದ ಕೀಶನ್ ಜಾಧವ್ (25), ಚನ್ನಪ್ಪ ಜಾಧವ್ (18), ಸುನೀಬಾಯಿ ರಾಠೋಡ (27), ನೇನು ಜಾಧವ್ (15) ನಾಲ್ವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಲೂಕಿನ ಜಿನಕೇರ ತಾಂಡಾದಲ್ಲಿ ಸೋಮವಾರ ಸಂಜೆ ಮಳೆ ಆರಂಭವಾಗುತ್ತಿದ್ದಂತೆಯೇ ಆಶ್ರಯಕ್ಕಾಗಿ ತಾಂಡಾದಲ್ಲಿನ ಚಿಕ್ಕದಾದ ಮುರಗಮ್ಮ ದೇವಿ ದೇವಸ್ಥಾನದಲ್ಲಿ ಜನರು ಆಶ್ರಯಕ್ಕಾಗಿ ನಿಂತಿದ್ದಾರೆ. ಮಳೆ ಜೋರಾಗಿ ಗುಡುಗು, ಮಿಂಚಿನ ಸದ್ದು ಹೆಚ್ಚಾದ ನಂತರ ಸ್ವಲ್ಪ ಹೊತ್ತಿನಲ್ಲಿಯೇ ಭಾರಿ ಸದ್ದಿನೊಂದಿಗೆ ಸಿಡಿಲು ನೇರವಾಗಿ ಗುಡಿಗೆ ಅಪ್ಪಳಿಸಿದ ಪರಿಣಾಮ ಒಳಗಿದ್ದವರ ಪೈಕಿ ನಾಲ್ವರು ಸ್ಥಳದಲ್ಲೇ  ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಗಣೇಶ, ದರ್ಶನ್ ಹಾಗೂ‌ ಮೌನೇಶ್ ಮೂವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next