Advertisement

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

05:13 PM Jul 25, 2024 | Team Udayavani |

ಯಾದಗಿರಿ: ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಗುರುವಾರ 2.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಈಗಾಗಲೇ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

Advertisement

ಶಹಾಪುರ ತಾಲೂಕಿನ ಕೊಳ್ಳೂರು ಸೇತುವೆ ಅಪಾಯಮಟ್ಟ ತಲುಪಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿವೆ. ಜಿಲ್ಲಾಡಳಿತ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಮಾಡಿ ಡಿಸಿ ಡಾ.ಸುಶೀಲಾ ಬಿ ಆದೇಶ ಹೊರಡಿಸಿದ್ದಾರೆ.

ಕೊಳ್ಳೂರ ಸೇತುವೆ ಮುಳುಗಡೆಯಾಗುವ ಸ್ಥಳಕ್ಕೆ ಶಹಾಪುರ ತಹಶೀಲ್ದಾರ ಉಮಾಕಾಂತ ಹಳ್ಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸೇತುವೆ ಮುಳಗಡೆ ಭೀತಿ ಹಿನ್ನೆಲೆಯಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ವಾಹನಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಭಾರಿ ಪ್ರಮಾಣದಲ್ಲಿ ಸುರಿದಿದ್ದು ಭೀಮಾ ನದಿಗೆ ಒಳ ಹರಿವು ಹೆಚ್ಚಾಗಿದೆ. ತಾಲೂಕಿನ ವಡಗೇರಾ ತಾಲೂಕಿನ ಗುರಸುಣಗಿ ಬ್ಯಾರೇಜ್‌ನಿಂದ ಭೀಮಾ ನದಿಗೆ 3000 ಕ್ಯೂಸೆಕ್ ನೀರು ಬಿಡಲಾಗಿದೆ.

Advertisement

ಯಾದಗಿರಿ ನಗರದ ಭೀಮಾ ನದಿ ತಟದಲ್ಲಿರುವ ವೀರಾಂಜನೇಯ ಹಾಗೂ ಕಂಗಳೇಶ್ವರ ದೇಗುಲ ಜಲಾವೃತಗೊಂಡಿದ್ದು, ನದಿ ದಡದಲ್ಲಿರುವ ಶಿವಲಿಂಗಕ್ಕೆ ಭೀಮಾ ನದಿ ನೀರು ತಗುಲಿದ್ದು ಜನರು ಶಿವಲಿಂಗ ನೋಡಲು ಯತ್ನಿಸುತ್ತಿದ್ದಾರೆ.

ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ

ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಹರಿ ಬಿಡಲಾಗಿದ್ದು, ನದಿ ಪಾತ್ರದ ಪದೇಶಗಳಲ್ಲಿ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಕ್ಕಾಗಿ ಕಟ್ಟೆಚ್ಚರಿಕೆ ಘೋಷಿಸಿದ್ದು, ನದಿ ನೀರಿಗೆ ರೈತರು, ಜಾನುವಾರುಗಳು ಇಳಿಯದಂತೆ ನಿಗಾವಹಿಸುವಂತೆ ಗ್ರಾಮದ ಪಿಡಿಓ ಹಾಗೂ ಗಸ್ತು ಪೊಲೀಸರಿಗೆ ಜಿಲ್ಲಾಡಳಿತ ಸೂಚಿಸಿದೆ. ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ಮುಳುಗಡೆ ಸಾಧ್ಯತೆ ಇದ್ದು, ಪೊಲೀಸರು ವಾಹನ ಸಂಚಾರಕ್ಕೆ ತಡೆಹಿಡಿದಿದ್ದಾರೆ. ಕೊಳ್ಳೂರು ಸೇತುವೆ ಸ್ಥಳಕ್ಕೆ ಶಹಾಪುರ ತಹಶಿಲ್ದಾರ್ ಉಮಾಕಾಂತ ಹಳ್ಳಿ ಭೇಟಿ ನೀಡಿದರು.

ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಈಗಾಗಲೇ ತಾಲೂಲು ಮಟ್ಟದ ಅಧಿಕಾರಿಗಳಿಗೆ ನಿಗಾ ವಹಿಸುವಂತೆ ಸೂಚಿಸಿದ್ದು, ಕೊಳ್ಳೂರು ಸೇತುವ ಹಾಗೂ ಯಾದಗಿರಿ ನಗರದ ಭೀಮಾ ನದಿಗೆ ಪೊಲೀಸರ ಬಂದೋಬಸ್ತ್ ನಿಯೋಜಿಸಲಾಗಿದೆ. ನದಿಗೆ ರೈತರು ಹಾಗೂ ಜಾನುವಾರುಗಳು ಇಳಿಯದಂತೆ ಗ್ರಾ.ಪಂ ಮಟ್ಟದ ಅಧಿಕಾರಿಗಳು ಎಚ್ಚರಿಕೆ ಕ್ರಮ ವಹಿಸಿದ್ದಾರೆ ಎಂದು ಡಿಸಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next