Advertisement

11,420 ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ಬಿಡುಗಡೆ

01:20 PM May 22, 2020 | Naveen |

ಯಾದಗಿರಿ: ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಒಟ್ಟು 11,420 ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದಿಂದ ಆತ್ಮ ನಿರ್ಭರ್‌ ಭಾರತ್‌ ಯೋಜನೆಯಡಿ ಆಹಾರ ಧಾನ್ಯ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಕೇಂದ್ರ ಸರ್ಕಾರದ ಆದೇಶದಂತೆ ಕೋವಿಡ್‌-19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಾಗೂ ಜಿಲ್ಲೆಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಒಳಪಡದ ವಲಸೆ ಕಾರ್ಮಿಕರು ಹಾಗೂ ಕೋವಿಡ್‌-19 ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಒಟ್ಟು 11,420 ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್‌ ಎರಡು ತಿಂಗಳಿಗೆ ಪ್ರತಿ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು ಜೂನ್‌ ತಿಂಗಳಲ್ಲಿ ಕೇಂದ್ರ ಸರ್ಕಾರದ ಹಂಚಿಕೆಗೆ ಅನುಗುಣವಾಗಿ ಕಡಲೆ ಕಾಳು ಉಚಿತವಾಗಿ ವಿತರಿಸಲಾಗುತ್ತದೆ.

ಆತ್ಮ ನಿರ್ಭರ್‌ ಭಾರತ್‌ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರುಗಳಿದ್ದಲ್ಲಿ ಜಿಲ್ಲೆಯ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ, ಆಯಾ ತಾಲೂಕಿನ ತಹಶೀಲ್ದಾರ್‌ ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರು ದಾಖಲಿಸಲು ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next