Advertisement

ದೋರನಹಳ್ಳಿ‌ ಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ನಿಧನ

08:12 AM Jan 12, 2023 | Team Udayavani |

ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

Advertisement

ಮುಂದಿನ ತಿಂಗಳು ಅವರ 25ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮ ಹಿನ್ನೆಲೆ ಗಣ್ಯರಿಗೆ ಆಮಂತ್ರಣ ನೀಡಲು ಬೆಂಗಳೂರಿಗೆ ತೆರಳಿದ್ದರು. ಎಲ್ಲರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ವಾಪಾಸ್ ಆಗುವ ವೇಳೆ ರೈಲು ನಿಲ್ದಾಣದಲ್ಲಿಯೇ ಶ್ರೀಗಳಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ ಎನ್ನಲಾಗಿದೆ.

ಕೂಡಲೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಆದರೆ ಅಷ್ಟೊತ್ತಿಗಾಗಲೇ ಅವರ ಪ್ರಾಣ ಪಕ್ಷಿ‌ ಹಾರಿ ಹೋಗಿತ್ತು ಎನ್ನಲಾಗಿದೆ.

ಶ್ರೀಗಳ ಅಗಲಿಕೆಯಿಂದ ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಭಕ್ತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಶ್ರೀಗಳು ಇನ್ನಿಲ್ಲ‌ಎಂಬ ಸುದ್ದಿ ತಿಳಿದ‌ ಭಕ್ತರು‌ ಗ್ರಾಮದ ಹಿರೇಮಠ ಮುಂದೆ ಜಮಾವಣೆಗೊಂಡಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಭಕ್ತಾಧಿಗಳು ಕಂಗಾಲಾಗಿದ್ದಾರೆ.

ರೈಲು ನಿಲ್ದಾಣದಲ್ಲಿ ಅವರ ಜೊತೆ ಭಕ್ತರಾದ ರಾಯಪ್ಪಗೌಡ ದರ್ಶನಾಪುರ ಮತ್ತು ಷಣ್ಮುಖಪ್ಪ ಕಕ್ಕೇರಿ ಇದ್ದರು. ಶ್ರೀಗಳಿಗೆ ಹೃದಯಾಘಾತ ಆಗಿರುವುದನ್ನು ಕಂಡು ಪರದಾಡಿದ್ದಾರೆ. ಪ್ರಥಮ ಚಿಕಿತ್ಸೆಗೆ ಮುಂದಾದರೂ ಯಾವುದೇ ಪ್ರಯೋಜನವಾಗದೆ ಕಂಗಾಲಾಗಿ ಕಂಬನಿ ಮಿಡಿದಿದ್ದಾರೆ. ವಿಷಯ ತಿಳಿದ ಕೂಡಲೇ ರಾತ್ರಿಯಿಂದಲೇ ಸಾವಿರಾರು  ಭಕ್ತರು ಮಠದತ್ತ ಧಾವಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next