Advertisement

ಅಧಿಕಾರಿಗಳ ನಿಷ್ಕಾಳಜಿಗೆ ಶಾಸಕರು ಗರಂ

04:00 PM Jan 25, 2020 | Naveen |

ಯಾದಗಿರಿ: ತಾಲೂಕಿನಲ್ಲಿ ಮೀನುಗಾರರಿಗೆ ಲೈಸನ್ಸ್‌ ಇಲ್ಲದಿರುವುದರಿಂದ ಸರ್ಕಾರದಿಂದ ನೀಡಲಾಗಿದ್ದ 95 ಮನೆಗಳು ವಾಪಸ್‌ ಹೋಗಿವೆ. ಇದಕ್ಕೆ ಯಾರು ಹೊಣೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಮೀನುಗಾರಿಗೆ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

Advertisement

ನಗರದ ತಾಪಂ ಕಚೇರಿಯಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕರು, ತಾಲೂಕಿನಲ್ಲಿ ಮೀನುಗಾರರ ಕುಟುಂಬಗಳಿವೆ. ಆದರೆ ಅವರ ಬಳಿ ಲೈಸನ್ಸ್‌ ಇಲ್ಲದಿರುವುದರಿಂದ ಸರ್ಕಾರಿ ಸೌಕರ್ಯ ಪಡೆಯಲಾಗಲಿಲ್ಲ ಎಂದು ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಮೀನುಗಾರಿಕೆ ಇಲಾಖೆ ಅಧಿಕಾರಿ ಮಹೇಶ, ಮೀನುಗಾರರ ಸಹಕಾರ ಸಂಘವಿದೆ. ಅವರು ಲೈಸನ್ಸ್‌ ನೀಡುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು. ಇಲಾಖೆ ಇರುವುದು ಏತಕ್ಕೆ? ಮೀನುಗಾರರ ಕುಟುಂಬಗಳಿಗೆ ಇಲಾಖೆಯಿಂದಲೇ ಲೈಸನ್ಸ್‌ ನೀಡಬೇಕು ಎಂದು ತಾಕೀತು ಮಾಡಿದರು.

ಮೀನು ಸಾಕಾಣಿಗೆ ಟೆಂಡರ್‌ ಕುರಿತು ಮಾಹಿತಿ ಪಡೆದ ಶಾಸಕರು, ಪ್ರತಿ ವರ್ಷಕ್ಕೊಮ್ಮೆ ಟೆಂಡರ್‌ ಕರೆಯಬೇಕು. ಐದು ವರ್ಷಗಳವರೆಗೆ ನವೀಕರಣ ಮಾಡುವ ನಿಯಮವಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಬಳಿಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲಿಸಿದ ಶಾಸಕರು, ತಮ್ಮ ಕ್ಷೇತ್ರದಲ್ಲಿ ಎಷ್ಟು ಜನರು ಆಯುಷ್ಮಾನ್‌ ಕಾರ್ಡ್‌ ಮಾಡಿಸಿಕೊಂಡಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ|ಹಣಮಂತರೆಡ್ಡಿ ಅವರಿಗೆ ಮಾಹಿತಿ ಕೇಳಿದರು.

ಅಧಿಕಾರಿ ಆಯುಷ್ಮಾನ್‌ ಕಾರ್ಡ್‌ ಫಲಾನುಭವಿಗಳ ಅಂಕಿ ಅಂಶ ನೀಡುವಲ್ಲಿ ವಿಫಲವಾದರು. ಅದಕ್ಕೆ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಆರೋಗ್ಯ ಇಲಾಖೆ ಬಗ್ಗೆ ಸಾಕಷ್ಟು ದೂರುಗಳಿವೆ. ಸುಧಾರಿಸಿಕೊಂಡು ಕಾಳಜಿಯಿಂದ ಕೆಲಸ ಮಾಡುವಂತೆ ತಾಕೀತು ಮಾಡಿದರು. ಮಹಿಳೆಯರ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆಯಲ್ಲಿ ಯಾದಗಿರಿ ಶೇ.51 ಸಾಧನೆಯಾಗಿದೆ. ಕಡಿಮೆ ಏಕೆ ಎಂಬ ಪ್ರಶ್ನಿಗೆ ಉತ್ತರಿಸಿದ ಅಧಿಕಾರಿ ತಾಲೂಕಿನಲ್ಲಿ ಒಬ್ಬರೇ ಶಶ÷ ಚಿಕಿತ್ಸಕರು ಇರುವುದರಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.

ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲಿಸಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅರ್ಹ ಫಲಾನುಭವಿಗಳಿಗೆ ಸೌಕರ್ಯ ಒದಗಿಸಲು ಸೂಚಿಸಿದರು. ಇಲಾಖೆ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ನೀಡದಿರುವುದರಿಂದ ಎಲ್ಲವನ್ನೂ ನಾವೇ ಕೇಳಿದ ಮೇಲೆಯೇ ಹೇಳುತ್ತಿದ್ದೀರಿ, ಯೋಜನೆಗಳ ಬಗ್ಗೆ ಏಕೆ ಮಾಹಿತಿ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ನಾವು ರಾಜಕಾರಣಿಗಳು, ನೀವೂ ರಾಜಕೀಯ ಮಾಡೋದು ಸರಿಯಲ್ಲ ಎಂದರು. ಬೇಸಿಗೆ ಕಾಲ ಸಮೀಪಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಿ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.

Advertisement

ಲೋಕೋಪಯೋಗಿ ಇಲಾಖೆ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕು, ಟೆಂಡರ್‌ ಕಡಿಮೆ ಮೊತ್ತಕ್ಕೆ ಹಾಕಿದ್ದಾರೆ ಎಂದು ಸುಮ್ಮನಿರಬಾರದು. ಕಾಮಗಾರಿ ಹೇಗೆ ಮಾಡಿದ್ದಾರೆ ಎನ್ನುವುದು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆ ಮತ್ತು ಸಮಾಜಿಕ ಅರಣ್ಯ ಇಲಾಖೆಯಿಂದ ಎಲ್ಲಿ ಸಸಿ ನೆಡುವ ಕಾರ್ಯವಾಗಿದೆ? ಸೋಲಾರ್‌ ಅಳವಡಿಕೆ ಎಲ್ಲಿಲ್ಲೆ ಅಗಿದೆ? ಸಿಲಿಂಡರ್‌ ವಿತರಣೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು. ಪಶುಪಾಲನಾ, ಕೃಷಿ, ಶಿಕ್ಷಣ, ಜೆಸ್ಕಾಂ, ಶಿಶು ಅಭಿವೃದ್ಧಿ ಯೋಜನೆ ಹೇಗೆ ಹಲವು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾಪಂ ಅಧ್ಯಕ್ಷೆ ಭೀಮವ್ವ ಎಂ. ಅಚ್ಚೋಲಾ, ತಾಪಂ ಅಧಿಕಾರಿ ಬಸವರಾಜ ಎಸ್‌. ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next