Advertisement

Yadagiri; ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

02:49 PM Feb 25, 2024 | Team Udayavani |

ಸುರಪುರ (ಯಾದಗಿರಿ): ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ನಾಯಕ ರಾಜಾ ವೆಂಕಟಪ್ಪ ನಾಯಕ ಅವರು ರವಿವಾರ (ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 67 ವರ್ಷದ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದರು. ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next