Advertisement

ಸಿಎಂ ಆಗಿ ಬಿಎಸ್‌ವೈ ಅವರೇ ಮುಂದುವರೆಯಲಿ : ಯಾದಗಿರಿಯಲ್ಲಿ ಮಠಾಧೀಶರ ಒತ್ತಾಯ

06:12 PM Jul 22, 2021 | Team Udayavani |

ಯಾದಗಿರಿ: ಬಿ.ಎಸ್ ಯಡಿಯೂರಪ್ಪನವರು ಹಲವು ವರ್ಷಗಳಿಂದ ಜನಪರ ಹೋರಾಟದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಎಲ್ಲಾ ವರ್ಗದ ಜನರಿಗೆ ಜನಪರ ಯೋಜನೆಗಳನ್ನು ನೀಡಿದ್ದಾರೆ.ಎಲ್ಲ ಜಾತಿಯ ಜನರ ಪ್ರೀತಿ ವಿಶ್ವಾಸ ಅವರ ಮೇಲಿದೆ. ಅವರ ಆಡಳಿತ ರಾಜ್ಯಕ್ಕೆ ಅವಶ್ಯಕವಿದೆ ಎಂದು ಯಾದಗಿರಿಯಲ್ಲಿ ಮಠಾಧೀಶರು ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದರು.

Advertisement

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಮಠಾಧೀಶರ ಒಕ್ಕೂಟದಿಂದ ಆಯೋಜಿಸಿದ ಸುದ್ದೀಗೋಷ್ಠಿಯಲ್ಲಿ ಮಾತನಾಡಿದ ಡಾ.ಗಂಗಾಧರ ಶ್ರೀ, ಬಿಜೆಪಿ ಹೈ ಕಮಾಂಡ್ ಬಿಎಸ್‌ವೈರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಸೂಕ್ತ ಎಂದರು.

ಗುರುಮಠಕಲ್ ಖಾಸಾಮಠದ ಪೀಠಾಧೀಪತಿ ಶಾಂತವೀರ ಗುರು ಮುರುಘರಾಜೇಂದ್ರ ಮಹಾ ಸ್ವಾಮೀಜಿ ಮಾತನಾಡಿ, ಬಿ.ಎಸ್ ಯಡಿಯೂರಪ್ಪನವರು ವೀರಶೈವ ಸಮಾಜದ ಹಿರಿಯ ನಾಯಕರಲ್ಲದೆ, ರಾಜ್ಯದ ಎಲ್ಲಾ ಸಮಾಜದ ಜನರನ್ನು ಒಟ್ಟಿಗೆ ತೆಗೆದು ಕೊಂಡು ಹೋಗುವ ಜೊತೆಗೆ ಪ್ರಗತಿ ಪೂರಕ ಆಡಳಿತ ನೀಡಿದ್ದಾರೆ. ಆದ್ದರಿಂದ ಬಿಜೆಪಿ ಹೈ ಕಮಾಂಡ್ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ನೇರಡಗುಂಬದ ಪಂಚಮ ಸಿದ್ದಲಿಂಗ ಸ್ವಾಮೀಜಿ, ಹೆಡಗಿಮದ್ರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಶಹಾಪೂರದ ಪಕೀರೇಶ್ವರ ಮಠದ ಪೀಠಾಧಿಪತಿ ಗುರುಪಾದಯ್ಯ ಸ್ವಾಮೀಜಿ, ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಕಡೇಚೂರಿನ ಗುರುಮೂರ್ತಿ ಶಿವಾಚಾರ್ಯರು, ಕೆಂಬಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next