Advertisement

ಯಾದಗಿರಿ ಜಿಲ್ಲಾಡಳಿತದಿಂದ ನಿಯಮ ಇನ್ನಷ್ಟು ಬಿಗಿ

12:13 PM Apr 07, 2020 | |

ಯಾದಗಿರಿ: ಕೊರೊನಾ ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು, ಹಂತ ಹಂತವಾಗಿ ನಿಯಮ ಬಿಗಿಗೊಳಿಸಿದೆ. ಇದೀಗ ಏ.6ರಿಂದ ಕೆಲವು ನಿಯಮಗಳನ್ನು ಪರಿಷ್ಕರಿಸಿ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ಬೆಳಗ್ಗೆ 4ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ದಿನಬಳಕೆಯ ದಿನಸಿ, ತರಕಾರಿ, ಹಣ್ಣು-ಹಂಪಲುಗಳ ಅಂಗಡಿಗಳು ತೆರೆದಿರಲಿವೆ. ಇತರೆ ಅಂಗಡಿ-ಮುಂಗಟ್ಟುಗಳನ್ನು ತೆರೆಯುವುದನ್ನು ನಿಷೇಧಿ ಸಲಾಗಿದೆ.

Advertisement

ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್‌-19ಗೆ ಒಬ್ಬರು ಮೃತಪಟ್ಟು ಹಾಗೂ ನಾಲ್ವರಲ್ಲಿ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ನೆರೆ ರಾಜ್ಯಗಳ ಜಿಲ್ಲೆಗಳಲ್ಲಿ ಕೋವಿಡ್‌-19 ಕೊರೊನಾ ವೈರಾಣು ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಏ.14ರ ಮಧ್ಯರಾತ್ರಿಯವರೆಗೆ ಜಿಲ್ಲೆಯ ಸಾರ್ವಜನಿಕರು ಅನುಸರಿಸಬೇಕಾದ ಅನುಸರಣ ಕ್ರಮಗಳನ್ನು ವಿಧಿಸಲಾಗಿದೆ.

ಈ ಹಿಂದೆ ಕೊರೊನಾ ವೈರಸ್‌ ಸೋಂಕಿನಿಂದಾಗಿ ಸಂಭವಿಸಬಹುದಾದ ಅನಾಹುತ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾ.21ರಿಂದ 31ರ ವರೆಗೆ ಕೈಗೊಳ್ಳಲಾಗಿದ್ದ ಕ್ರಮಗಳನ್ನು ಏ.14ರ ಮಧ್ಯರಾತ್ರಿಯವರೆಗೆ ಮುಂದುವರಿಸಲಾಗಿದೆ. ಪೆಟ್ರೋಲ್‌ ಬಂಕ್‌ಗಳು ಖಾಸಗಿ ವಾಹನಗಳಿಗೆ ಬೆಳಗ್ಗೆ 4 ಗಂಟೆಯಿಂದ ಸಂಜೆ 4ರ ವರೆಗೆ ಮಾತ್ರ ಇಂಧನ ವಿತರಿಸಬೇಕು. ಸರಕು ಸಾಗಾಣಿಕೆ ವಾಹನಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ.
ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಮನೆಯಿಂದ ಓರ್ವ ಆರೋಗ್ಯವಂತ ವ್ಯಕ್ತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಗುಂಪುಗೂಡದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಸಮಯ ನಿಗದಿಪಡಿಸಲಾಗಿದ್ದರೂ ನಿಷೇಧಾಜ್ಞೆ ಸಮಯದಲ್ಲಿ ಸಾರ್ವಜನಿಕರು ವಿನಾಕಾರಣ ತಿರುಗಾಡುವುದು, ಗುಂಪುಗೂಡುವಂತಿಲ್ಲ. ಅಂಗಡಿ ಮುಂದೆ ಜನಸಂದಣಿ ಸೇರದಂತೆ ವ್ಯಕ್ತಿಯಿಂದ ವ್ಯಕ್ತಿಗೆ 1 ಮೀ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಮಾಡುವ ಬಗ್ಗೆ ಕ್ರಮ ವಹಿಸುವುದು. ಇಲ್ಲದಿದ್ದಲ್ಲಿ ಅಂತಹ
ಅಂಗಡಿ ಮಾಲೀಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಈ ಆದೇಶವು ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧ ಅಂಗಡಿಗಳು, ಸಿಲಿಂಡರ್‌ ವಿತರಣಾ ವ್ಯವಸ್ಥೆ, ದಿನ ಪತ್ರಿಕೆಗಳ ವಿತರಣೆ, ಬ್ಯಾಂಕ್‌/ಎ.ಟಿ.ಎಂ. ಗಳು, ಗೃಹ ಬಳಕೆಯ ಇಂಧನದ ಟ್ಯಾಂಕರ್‌ ಗಳು, ಪಡಿತರ ವಿತರಣೆ ಹಾಗೂ ಶವ ಸಂಸ್ಕಾರ ಇತ್ಯಾದಿ ಸೇವೆಗಳು ಹಾಗೂ ತುರ್ತು ಸೇವೆಗಳಿಗೆ ಅನ್ವಯವಾಗಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಮೈಕ್‌ ಮೂಲಕ ಜಾಗೃತಿ: ಜಿಲ್ಲಾಡಳಿತ ನಿಯಮಗಳನ್ನು ಸಾರ್ವಜನಿಕರು ಪಾಲಿಸುವ ನಿಟ್ಟಿನಲ್ಲಿ ಅಧಿ ಕಾರಿಗಳು ವಾಹನದಲ್ಲಿ ಮೈಕ್‌ ಮೂಲಕ ಜಾಗೃತಿ ಮೂಡಿಸಿದರು. ಪೆಟ್ರೋಲ್‌ ಬಂಕ್‌ನಲ್ಲಿ ಸಂಜೆ 4 ಗಂಟೆವರೆಗೆ ಮಾತ್ರ ಇಂಧನ ವಿತರಿಸುವಂತೆ ಸೂಚಿಸಿದರು. ತರಕಾರಿ ಮಾರಾಟ ಸ್ಥಳಕ್ಕೆ ತೆರಳಿ ತಿಳಿಸಿದ ಬಳಿಕ ಎಲ್ಲಾ ತರಕಾರಿ ಮಾರಾಟಗಾರರು ತಳ್ಳುಗಾಡಿಗಳನ್ನು ಬಂದ್‌ ಮಾಡುತ್ತಿರುವುದು ಕಂಡು ಬಂತು.

Advertisement
Advertisement

Udayavani is now on Telegram. Click here to join our channel and stay updated with the latest news.

Next