Advertisement

ವಿವಿಧೆಡೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಭೇಟಿ

01:54 PM Apr 25, 2020 | Naveen |

ಯಾದಗಿರಿ: ರಾಜ್ಯದಲ್ಲಿ ಕೋವಿಡ್‌ -19 ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ ಪ್ರಯುಕ್ತ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

Advertisement

ಶಹಾಪುರ ತಾಲೂಕು ಹತ್ತಿಗುಡೂರ ಆರೋಗ್ಯ ಉಪ ಕೇಂದ್ರ ಮತ್ತು ಕೊಂಗಂಡಿ ಆರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಕುರಿತು ಮಾಹಿತಿ ಪಡೆದರು. ಏಪ್ರಿಲ್‌ 7ರಂದು ಮೃತಪಟ್ಟ ಕೊಂಗಂಡಿ ಗ್ರಾಮದ 4 ವರ್ಷದ ಮಗುವಿನ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಕೊಳ್ಳೂರು ಎಂ. ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯನಿರ್ವಹಣೆ ಹಾಗೂ ವಾಹನಗಳ ಸಂಚಾರ ಕುರಿತು ಪರಿಶೀಲಿಸಿದರು. ಅಲ್ಲದೇ, ವಡಗೇರಾ ತಾಲೂಕು ನಾಯ್ಕಲ್‌ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆಹಾನಿ ಕೂಡ ಪರಿಶೀಲನೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next