Advertisement

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ

10:04 PM Sep 14, 2023 | Team Udayavani |

ಯಾದಗಿರಿ: ತಾಲೂಕಿನ ಬಗ್ಗಲಮಡು-ಹಂದಿರಕಿ ರಸ್ತೆ ಭಾಗದಲ್ಲಿ ಕಾರಿನಲ್ಲಿ ಶ್ರೀಗಂಧ ಕಟ್ಟಿಗೆ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಮಿಂಚಿನ ಕಾರ್ಯಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿ ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಸಚಿನ್‌ ಎಂಬಾತನಾಗಿದ್ದು, ಮತ್ತೋರ್ವ ಆರೋಪಿ ಪಾಂಡುರಂಗ ಎಂಬುವವನು ಪರಾರಿಯಾಗಿದ್ದಾನೆ.

ಈ ಬಗ್ಗೆ ಪ್ರಾದೇಶಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್ ಮಾತನಾಡಿ, ಕಾರಿನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿರುವ ಮಾಹಿತಿ ಮೆರೆಗೆ ನಮ್ಮ ಅಧಿಕಾರಿಗಳು ದಾಳಿ ನಡೆಸಿ,150 ಕೆಜಿ ಶ್ರೀಗಂಧ ಕಟ್ಟಿಗೆ ಸಹಿತ ಆರೋಪಿ ಸಚಿನ್ ನನ್ನು ಬಂಧಿಸಲಾಗಿದ್ದು, ಬಂಧಿತನಿAದ ಕಾರ್, ಒಂದು ಬೈಕ್ ಹಾಗೂ ಎರಡು ಕೊಡಲಿ ಜಪ್ತಿ ಮಾಡಲಾಗಿದೆ, ಈ ಕುರಿತು ಅರಣ್ಯ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಯಾದಗಿರಿ ಡಿಎಫ್ಒ ಕಾಜೋಲ್ ಪಾಟೀಲ, ಎಸಿಎಫ್ ಸುನೀಲ್ ಜಿ. ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಜಯವರ್ಧನ ತಳವಾರ ಅವರ ನೇತೃತ್ವದಲ್ಲಿ ಮಿಂಚಿನ ಕಾರ್ಯಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next