Advertisement

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ

10:12 AM May 07, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಬಿಗಿ ಕ್ರಮ ಅನಿವಾರ್ಯವಾಗಿದೆ, ಲಾಕ್ ಡೌನ್ ಅನಿವಾರ್ಯ ಆಗಬಹುದು ಎಂದಿದ್ದಾರೆ.

ಇದೇ ವೇಳೆ ಬೆಡ್​ ಸಮಸ್ಯೆ ಬಗ್ಗೆ ತೇಜಸ್ವಿ ಸೂರ್ಯ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಿಎಂ, ಜಮೀರ್​ ಅಹ್ಮದ್​ ಅವರು ಈ ರೀತಿ ಮಾತನಾಡುವುದು ಸರಿಯಲ್ಲ.ತೇಜಸ್ವಿ ಸೂರ್ಯ ರಿಸ್ಕ್​ ತಗೊಂಡು ಅಕ್ರಮವನ್ನು ಬೆಳಕಿಗೆ ತಂದಿದ್ದಾರೆ. ನಾನು ವಿಧಾನಸೌಧದಲ್ಲಿ ಈ ಬಗ್ಗೆ ಒಂದು ಗಂಟೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡು ಬಿಗಿ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next