Advertisement

ಮೋದಿ ಹೇಳಿದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ

11:07 AM May 05, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿರೋ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಸುಪ್ರೀಂ ಕೋರ್ಟ್ ಸೂಚನೆ ವಿಚಾರವಾಗಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಅಂತ ನಿರ್ಧರಿಸುತ್ತೇವೆ. ಮೋದಿ ಲಾಕ್ ಡೌನ್ ಮಾಡಿ ಅಂದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರ 119ನೇ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧ ಆವರಣದಲ್ಲಿರೋ ಕೆ.ಸಿ ರೆಡ್ಡಿ ಪುತ್ತಳಿಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

ನಮ್ಮ ರಾಜ್ಯದ ಮೊದಲ ಸಿಎಂ ಕ್ಯಾಸಂಬಳ್ಳಿಯ ಬಹುಮುಖ ಪ್ರತಿಭೆ ಕೆ.ಸಿ ರೆಡ್ಡಿ. ದೇಶದ ಸ್ವಾತಂತ್ರ್ಯಕ್ಕಾಗಿ ಮೂರು ಬಾರಿ ಸೆರೆವಾಸ ಅನುಭವಿಸಿದರು. ಶಾಸಕರಾಗಿ, ಎಂಪಿ, ಸಿಎಂ ಸೇರಿದಂತೆ ಹಲವು ಜವಾಬ್ದಾರಿ ನಿಭಾಯಿಸಿದ್ದಾರೆ. ನೇರ ವ್ಯಕ್ತಿತ್ವದ ವ್ಯಕ್ತಿ. ಅವರನ್ನ ಸ್ಮರಿಸಿಕೊಳ್ಳಬೇಕು. ವಿಧಾನಸೌಧ ಕಟ್ಟಡದ ನಿರ್ಮಾಣದಲ್ಲಿ ಅವರ ಪಾತ್ರವೂ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next