Advertisement

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಭೇಟಿ

02:46 PM Apr 29, 2022 | Team Udayavani |

ಕಾಪು: ಶಿಲಾ ಶಿಲ್ಪ ಮತ್ತು ದಾರು ಶಿಲ್ಪದ ವೈಭವದೊಂದಿಗೆ ವಾಸ್ತವ ವಾಸ್ತುವಿಗೆ ಬದ್ಧವಾಗಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ಭೇಟಿ ನೀಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನವು ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿದ್ದು ಇಲ್ಲಿಯ ಶಿಲಾಶಿಲ್ಪ ಮತ್ತು ದಾರು ಶಿಲ್ಪದ ವೈಭವವು ಎಲ್ಲರ ಗಮನ ಸೆಳೆಯುತ್ತಿದೆ. ಮಹಾಲಕ್ಷ್ಮಿ ಯ ಅನುಗ್ರಹದಿಂದ ಶ್ರೀ ಕ್ಷೇತ್ರ ವು ಇನ್ನಷ್ಟು ವೈಭವದೊಂದಿಗೆ ಮೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜ‌ ಡಾ. ಜಿ. ಶಂಕರ್ ಅವರು ಕ್ಷೇತ್ರದ ವತಿಯಿಂದ ಯದುವೀರ್ ಅವರನ್ನು ಗೌರವಿಸಿದರು. ಕ್ಷೇತ್ರದ ಅರ್ಚಕ ವೇ. ಮೂ. ವಿಷ್ಣುಮೂರ್ತಿ ಉಪಾಧ್ಯಾಯ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು.

ಇದನ್ನೂ ಓದಿ:‘ಹೋರಿ ಕಂಡರೆ ಹೇಳಿಬಿಡಿ’; ಶಿವಮೊಗ್ಗ ಉಜ್ಜನೇಶ್ವರ ದೇವಸ್ಥಾನದ ಮೂರು ಹೋರಿಗಳು ನಾಪತ್ತೆ!

Advertisement

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಅಮೀನ್ ಹಾಗೂ ವಿವಿಧ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next