Advertisement

ಯದುವೀರ್‌ ಒಡೆಯರ್‌ ಪ್ರವಾಸೋದ್ಯಮ ರಾಯಭಾರಿ

06:55 AM Sep 25, 2018 | Team Udayavani |

ಮೈಸೂರು: ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗಲು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒಪ್ಪಿಗೆ ಸೂಚಿಸಿದ್ದಾರೆ. 

Advertisement

ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಅವರು ಅರಮನೆಗೆ ಭೇಟಿ ನೀಡಿ ಪ್ರವಾಸೋದ್ಯಮದ ಉತ್ತೇಜನ ದೃಷ್ಟಿಯಿಂದ ಮೈಸೂರು ಭಾಗದಲ್ಲಿ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ಯದುವೀರ್‌ ಅವರಿಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರ ಸಚಿವ ಸಾ.ರಾ. ಮಹೇಶ್‌ ಅವರಿಗೆ ಪತ್ರ ಬರೆದಿರುವ ಯದುವೀರ್‌ ಅವರು, ಮೈಸೂರು ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗುವಂತೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಕೃತಜ್ಞತೆ. ನನ್ನ ನಗರಕ್ಕೆ ಸೇವೆ ಸಲ್ಲಿಸುವ ಹಾಗೂ ಮೈಸೂರು ನಗರವನ್ನು ದಕ್ಷಿಣ ಭಾರತದ ಪ್ರವಾಸೋದ್ಯಮ ಕೇಂದ್ರವಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ದೊರೆತಿರುವುದು ಸಂತೋಷದ ವಿಷಯ ಎಂದಿದ್ದಾರೆ.

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮೈಸೂರು ಭಾಗದ ಮೈಸೂರು, ಚಾಮರಾಜ ನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿಯಾಗಲು ಹಾಗೂ ಈ ಮೂಲಕ ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುವ ನಿರ್ಧಾರಕ್ಕೆ ಸಚಿವ ಸಾ.ರಾ.ಮಹೇಶ್‌ ಅವರು ಅಭಿನಂದನೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next