Advertisement

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

02:28 PM Apr 15, 2024 | Team Udayavani |

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಸಮಾವೇಶ ನಡೆದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.

Advertisement

ರವಿವಾರ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್ ನ ಘಟಾನುಘಟಿ ನಾಯಕರು, ಲಕ್ಷಾಂತರ ಮಂದಿ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಇದರಿಂದಾಗಿ ಭಾರೀ ಪ್ರಮಾಣದ ಕಸ ಎಲ್ಲೆಂದರಲ್ಲಿ ಬಿದ್ದಿತ್ತು. ಹಾಗಾಗಿ ಇಂದು ಬೆಳ್ಳಂಬೆಳಿಗ್ಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯದುವೀರ್ ಒಡೆಯರ್ ಕಸ ಸಂಗ್ರಹಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ಕೂಡ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದು, ರಾಜಮನೆತನದ ಯದುವೀರ್ ದಂಪತಿಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next