Advertisement

ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಯದುವೀರ್‌ ಭೇಟಿ

01:30 PM Feb 09, 2021 | Team Udayavani |

ಗುಂಡ್ಲುಪೇಟೆ: ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮೈಸೂರು ರಾಜ ವಂಶಸ್ಥರಾದ ಯದುವೀರ ದಂಪತಿ ಮತ್ತು ಪುತ್ರನ ಸಮೇತ ಭೇಟಿ ನೀಡಿ ವೇಣುಗೋಪಾಲಸ್ವಾಮಿ ದರ್ಶನ ಪಡೆದರು.

Advertisement

ಪ್ರತಿ ವರ್ಷದಂತೆ ಈ ಬಾರಿಯೂ ಬೆಟ್ಟಕ್ಕೆ ಆಗಮಿಸಿದ ಯದುವೀರ್‌ ಮತ್ತು ಪತ್ನಿ ತ್ರಿಷಿಕಾ, ಪುತ್ರ ಆದ್ಯವೀರ್‌ ಹಾಗೂ ಕುಟುಂಬಸ್ಥರನ್ನು ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್‌ ಮತ್ತು ತಂಡ ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.

ಇದನ್ನೂ ಓದಿ :ವಿರೋಧಪಕ್ಷ ವೇ ಡಕೋಟಾ: ಸಚಿವ

ನಂತರ ದೇವಾಲಯಕ್ಕೆ ತೆರಳಿದ ಯದುವೀರ್‌ ಮತ್ತು ಕುಟುಂಬಸ್ಥರು ಹಿಮವದ್‌ ವೇಣು  ಪಾಲಸ್ವಾಮಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಿ ನಂತರ ಮೈಸೂರಿಗೆ ತೆರಳಿದರು. ಈ ವೇಳೆ ಡಿವೈಎಸ್‌ಪಿ ಪ್ರಿಯದರ್ಶಿನಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಲಕ್ಷ್ಮೀಕಾಂತ್‌, ಆರ್‌ಎಫ್ಒ ಎನ್‌.ಪಿ. ನವೀನ್‌ ಕುಮಾರ್‌  ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next