Advertisement

ಬಹುಮತ ಸಾಬೀತು ಪಡಿಸುವುದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ

07:14 PM May 18, 2018 | udayavani editorial |

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ನಾಳೆ ಶನಿವಾರ ರಾಜ್ಯ ವಿಧಾನಸಭೆಯ ಸದನದಲ್ಲಿ ಬಿಜೆಪಿ ಬಹುಮತ ಸಾಬೀತು ಮಾಡುವುದೆಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

Advertisement

ಪಕ್ಷದ ಶಾಸಕರಿಗೆ ತಂಗಲು ಅವಕಾಶ ಮಾಡಿಕೊಡಲಾಗಿರುವ ಹೊಟೇಲಿನಲ್ಲಿ ಇಂದು ರಾತ್ರಿಯೊಳಗೆ ಎಲ್ಲ ಬಿಜೆಪಿ ಶಾಸಕರು ಆಗಮಿಸಿ ತಂಗಬೇಕು ಮತ್ತು ನಾಳೆ 11 ಗಂಟೆಯ ಒಳಗೆ ಸದನಕ್ಕೆ ಹೋಗಲು ಸಜ್ಜಾಗಬೇಕು ಎಂದು ಶಾಸಕರಿಗೆ ಖಡಕ್‌ ಅಪ್ಪಣೆ ನೀಡಲಾಗಿದೆ. 

ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾರಣ ರಾಜ್ಯಪಾಲರು ಅದಕ್ಕೆ ಸರಕಾರ ರಚಿಸುವ ಆಹ್ವಾನ ನೀಡಿದ್ದರು. ರಾಜ್ಯಪಾಲರ ಒಪ್ಪಿಗೆ ಮೇರೆಗೆ ತಾನು ಗುರುವಾರ ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು. ಸುಪ್ರೀಂ ಕೋರ್ಟ್‌ ತೀರ್ಪಿನ ಕುರಿತಾಗಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

ನಾಳೆ ಸದನದಲ್ಲಿ ಬಿಜೆಪಿ ತನ್ನ ಬಹುಮತವನ್ನು ಹೇಗೆ ಸಾಬೀತುಪಡಿಸುತ್ತದೆ ಎಂಬುದನ್ನು ಕಾಣಲು ಇಡಿಯ ದೇಶವೇ ಕುತೂಹಲ ತಳೆದಿರುವ ನಡುವೆಯೇ ಯಡಿಯೂರಪ್ಪ ಅವರು ಶೇಕಡಾ ನೂರಕ್ಕೆ ನೂರು ತಾನು ಬಹುಮತ ಸಾಬೀತುಪಡಿಸುವುದು ಖಚಿತ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಎಲ್ಲರ ಹುಬ್ಬು ಮೇಲೇರಲು ಕಾರಣವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next