Advertisement

ರಫೇಲ್‌ ತೀರ್ಪಿನ ಪುನರ್‌ ಪರಿಶೀಲನೆ: ಸುಪ್ರೀಂ ಕೋರ್ಟಿಗೆ ಮನವಿ

06:23 AM Jan 02, 2019 | udayavani editorial |

ಹೊಸದಿಲ್ಲಿ : ಕಳೆದ ಡಿ.14ರಂದು ರಫೇಲ್‌ ಫೈಟರ್‌ ಜೆಟ್‌ ಡೀಲ್‌ ಕುರಿತಾಗಿ ನೀಡಲಾಗಿದ್ದ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರಿ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್‌ ಶೌರಿ ಮತ್ತು ವಕೀಲ ಪ್ರಶಾಂತ್‌ ಭೂಷಣ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದಾರೆ. 

Advertisement

ಸುಪ್ರೀಂ ಕೋರ್ಟ್‌ ಡಿ.14ರ ತನ್ನ ತೀರ್ಪಿನಲ್ಲಿ ಫ್ರಾನ್ಸ್‌ ನಿಂದ ಭಾರತ ಪಡೆಯಲಿರುವ 36 ರಫೇಲ್‌ ಜೆಟ್‌ ಖರೀದಿ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾ ಮಾಡಿತ್ತು. 

ಕೇಂದ್ರ ಸರಕಾರ ಸಹಿ ಇಲ್ಲದ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ತಪ್ಪು ಮಾಹಿತಿಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್‌ ಡಿ.14ರ ತೀರ್ಪು ನೀಡಿತ್ತು. ಆದುದರಿಂದ ತೀರ್ಪನ್ನು ಪುನರ್‌ ಪರಿಶೀಲಿಸಬೇಕು ಮತ್ತು ವಿಚಾರಣೆಯನ್ನು ಮುಕ್ತ ನ್ಯಾಯಾಲಯದಲ್ಲಿ ಕೈಗೊಳ್ಳಬೇಕು ಎಂದು ಕೋರಿ ಈ ಮೂವರು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next