Advertisement

ಬೆಂಗಳೂರು ಸುತ್ತಮುತ್ತ ಯಜಮಾನ ಹಾಡು

05:43 AM Jan 01, 2019 | |

ದರ್ಶನ್‌ ನಾಯಕರಾಗಿರುವ “ಯಜಮಾನ’ ಚಿತ್ರದ ಹಾಡುಗಳ ಚಿತ್ರೀಕರಣ ಆರಂಭವಾಗಿದೆ. ಬೆಂಗಳೂರಿನಲ್ಲಿ ಸೆಟ್‌ ಹಾಕಿ ಅದ್ಧೂರಿಯಾಗಿ ಚಿತ್ರೀಕರಿಸಲಾಗುತ್ತಿದೆ. ಮೂರ್‍ನಾಲ್ಕು ದಿನಗಳ ಕಾಲ ಹಾಡುಗಳ ಚಿತ್ರೀಕರಣ ನಡೆಯಲಿದ್ದು, ಅಲ್ಲಿಗೆ “ಯಜಮಾನ’ ಚಿತ್ರೀಕರಣ ಮುಗಿದಂತೆ.

Advertisement

ಈ ಹಿಂದೆ ಚಿತ್ರದ ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವೀಡನ್‌ಗೆ ತೆರಳಿತ್ತು. ಅಂಬರೀಶ್‌ ಅವರ ನಿಧನದಿಂದ ವಾಪಾಸ್‌ ಬಂದ ಚಿತ್ರತಂಡ, ಈಗ ಬೆಂಗಳೂರು ಸುತ್ತಮುತ್ತ ಸೆಟ್‌ಹಾಕಿ ಆ ಹಾಡನ್ನು ಚಿತ್ರೀಕರಿಸುತ್ತಿದೆ. ದರ್ಶನ್‌ ಸಖತ್‌ ಸ್ಟೈಲಿಶ್‌ ಆಗಿ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ದರ್ಶನ್‌ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಚಿತ್ರವನ್ನು ಹರಿಕೃಷ್ಣ ಹಾಗೂ ಪೊನ್‌ಕುಮಾರ್‌ ನಿರ್ದೇಶಿಸುತ್ತಿದ್ದಾರೆ. ಮಿಡಿಯಾ ಹೌಸ್‌ ಬ್ಯಾನರ್‌ನಡಿ ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ “ಯಜಮಾನ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next