Advertisement

ನಾಪತ್ತೆಯಾಗಿದ್ದ ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ

07:06 PM Apr 28, 2021 | Team Udayavani |

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ.

Advertisement

ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ.

ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರು ಉದಯ ಹೆಗಡೆಯವರು ಬೆಂಗಳೂರಿನ ಸಂಬಂಧಿಯ ಮನೆಯಲ್ಲಿ ವಾಸವಿರುವುದು ಪತ್ತೆ ಹಚ್ಚಿದ್ದಾರೆ. ನಾಪತ್ತೆ ಕಾರಣ ಹೆಚ್ಚಿನ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ :ನೋಂದಣಿಗೆ ಮುಗಿಬಿದ್ದ ಜನ…1 ನಿಮಿಷದಲ್ಲಿ ಕೋ ವಿನ್ ಪೋರ್ಟಲ್ ಗೆ 27 ಲಕ್ಷ ಹಿಟ್ಸ್!

Advertisement

Udayavani is now on Telegram. Click here to join our channel and stay updated with the latest news.

Next