Advertisement

ತೆಂಕಿನ ಪರಂಪರೆಯ ಭಾಗವತ ಪ್ರಸಾದ್ ಬಲಿಪ ವಿಧಿವಶ

12:05 AM Apr 12, 2022 | Team Udayavani |

ಮಂಗಳೂರು: ಯಕ್ಷಗಾನ ರಂಗದ ತೆಂಕುತಿಟ್ಟಿನ ಅಗ್ರಗಣ್ಯ ಬಲಿಪ ಪರಂಪರೆಯ ಕೊಂಡಿಯೊಂದು ಕಳಚಿ ಹೋಗಿದ್ದು, ಪ್ರಸಿದ್ಧ ಭಾಗವತ ಪ್ರಸಾದ ಬಲಿಪ  ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

Advertisement

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ತನ್ನ ಪರಂಪರೆಯ ವಿಶಿಷ್ಟ ಕಂಚಿನ ಕಂಠದ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಪ್ರಸಾದ್ ಅವರು ತಂದೆ ಖ್ಯಾತ ಭಾಗವತ ನಾರಾಯಣ ಬಲಿಪ , ಪತ್ನಿ, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಸಾದ ಬಲಿಪರು ದೇವಿ ಮಹಾತ್ಮೆ, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಏರು ಪದ್ಯಗಳ ಮೂಲಕ ಬಲಿಪ ಪರಂಪರೆಯ ಶೈಲಿಯ ಪ್ರತಿನಿಧಿಯಾಗಿ ಭಾಗವತನ ಸ್ಥಾನ ತುಂಬಿದ್ದರು.

ಗಣ್ಯರ ಸಂತಾಪ
ಸಚಿವ ಸುನಿಲ್‌ ಕುಮಾರ್‌, ಹಿರಿಯ ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ, ಮೂಡುಬಿದಿರೆಯ ಯಕ್ಷ ಸಂಗಮದ ಸಂಚಾಲಕ ಎಂ. ಶಾಂತಾರಾಮ ಕುಡ್ವ, ಯಕ್ಷದೇವ ಮಿತ್ರಕಲಾ ಮಂಡಳಿಯ ದೇವಾನಂದ ಭಟ್‌, ಯಕ್ಷ ದೇಗುಲದ ಸಂಚಾಲಕ ಮಹಾವೀರ ಪಾಂಡಿ, ಯಕ್ಷ ಮೇನಕಾ ಸಂಚಾಲಕ ಸದಾಶಿವ ನೆಲ್ಲಿಮಾರು, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next