Advertisement

ಯಕ್ಷ ಸಾಧಕರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ 

06:00 AM Nov 23, 2018 | |

 ಯಕ್ಷಗಾನ ಕಲಾರಂಗ (ರಿ.) ಉಡುಪಿ, ಯಕ್ಷಗಾನ ಕಲೆ, ಕಲಾವಿದರು ಹಾಗೂ ವಿದ್ಯಾರ್ಥಿಗಳ ಕ್ಷೇಮ ಚಿಂತನೆಗೆ ಸಂಬಂಧಿಸಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಾರ್ಯನಿರ್ವಹಿಸುತ್ತಿದೆ. ಪ್ರತಿವರ್ಷ 16 ಜನ ಹಿರಿಯ ಸಾಧಕ ಕಲಾವಿದರಿಗೆ ರೂ. 20,000 ನಗದು ಪುರಸ್ಕಾರದೊಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್‌ 25ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಲಿದೆ. 

Advertisement

ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥಗೆ ಪಟ್ಲಗುತ್ತು ಮಹಾಬಲ ಶೆಟ್ಟಿ ಒಗೆನಾಡು, ಪ್ರೊ| ಬಿ. ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಗೆ ಜಯಂತ ನಾಯ್ಕ ಶಂಕರನಾರಾಯಣ, ನಿಟ್ಟೂರು ಸುಂದರ ಶೆಟ್ಟಿ- ಮಹೇಶ ಡಿ.ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಸುಬ್ರಾಯ ಪಾಟಾಳಿ ಸಂಪಾಜೆ, ಬಿ. ಜಗಜ್ಜೀವನ್‌ದಾಸ್‌ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ರಾಜರತ್ನಂ ದೇವಾಡಿಗ ಪುತ್ತೂರು, ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಸೀತಾರಾಮ ಹೆಗಡೆ ಉಳವಿ, ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಗೆ ಉಬರಡ್ಕ ಉಮೇಶ್‌ ಶೆಟ್ಟಿ ಬೆಳ್ತಂಗಡಿ, ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿಗೆ ಎಚ್‌. ಶ್ರೀಧರ ಹಂದೆ ಕೋಟ, ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಟಾರ್‌- ಭಾಗವತ ವಾದಿರಾಜ ಹೆಬ್ಟಾರ್‌ ಸ್ಮರಣಾರ್ಥ ಪ್ರಶಸ್ತಿಗೆ ನರಾಡಿ ಭೋಜರಾಜ ಶೆಟ್ಟಿ ಹಳ್ಳಾಡಿ, ಶಿರಿಯಾರ ಮಂಜು ನಾಯ್ಕ ಸ್ಮರಣಾರ್ಥ ಪ್ರಶಸ್ತಿಗೆ ಕೊಕ್ಕುಡ್ತಿ ಕೃಷ್ಣಮೂರ್ತಿ ತೀರ್ಥಹಳ್ಳಿ, ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿಗೆ ಭಾಸ್ಕರ ಜೋಶಿ ಶಿರಳಗಿ ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿಗೆ ಜಯರಾಮ ಆಚಾರ್ಯ ಬಂಟ್ವಾಳ, ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿಗೆ ಡಿ. ಸಂತೋಷ್‌ ಕುಮಾರ್‌ ಬೆಳ್ತಂಗಡಿ, ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ ಪುತ್ತಿಗೆ ರಘುರಾಮ ಹೊಳ್ಳ ಸುರತ್ಕಲ್‌, ಐರೋಡಿ ರಾಮ ಗಾಣಿಗ ಸ್ಮರಣಾರ್ಥ ಪ್ರಶಸ್ತಿಗೆ ಕೃಷ್ಣ ತಿಮ್ಮಯ್ಯ ಹೆಗಡೆ ಬಾಳೆಹದ್ದ, ಕೋಳ್ಯೂರು ರಾಮಚಂದ್ರ ರಾವ್‌ ಗೌರವಾರ್ಥ ಪ್ರಶಸ್ತಿಗೆ ಟಿ.ಕೆ ಗಣೇಶ್‌ ಭಟ್‌ ಹಳುವಳ್ಳಿ, ಪ್ರಭಾವತಿ ವಿ. ಶೆಣೈ- ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿಗೆ ರಾಮ ದೇವಾಡಿಗ ಕೊಚ್ಚಾಡಿ ಆಯ್ಕೆಯಾಗಿದ್ದಾರೆ. 

ಪ್ರೊ| ನಾರಾಯಣ ಎಂ.ಹೆಗಡೆ 

Advertisement

Udayavani is now on Telegram. Click here to join our channel and stay updated with the latest news.

Next