Advertisement

Yakshagana; ಕೊಳ್ಯೂರು ರಾಮಚಂದ್ರ ರಾವ್ ಮನೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

09:10 PM Oct 14, 2023 | Team Udayavani |

ಕಾಪು: ಯಕ್ಷಗಾನ ರಂಗದ ಪ್ರಖ್ಯಾತ ಸ್ತ್ರೀ ವೇಷಧಾರಿ, ಗಿ ಮಾತಿನ ಮಲ್ಲ ಎಂಬ ಬಿರುದು ಪಡೆದ ಕೊಳ್ಯೂರು ರಾಮಚಂದ್ರ ರಾವ್ ಅವರ ಇನ್ನಂಜೆ ನಿವಾಸಕ್ಕೆ ಅ. 14 ರಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಅಭಿನಂದಿಸಿದರು.

Advertisement

ಶಾಸಕರು ಮಾತನಾಡಿ ಕೊಳ್ಯೂರು ರಾಮಚಂದ್ರ ರಾವ್ ಅವರ ಬದುಕು ನಮ್ಮೆಲ್ಲರಿಗೂ ಆದರ್ಶ, ಅವರು ನೂರು ವರ್ಷದ ಬದುಕನ್ನ ಬದಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರಾದ ದಿವೇಶ್ ಶೆಟ್ಟಿ, ಸವಿತಾ ಶೆಟ್ಟಿ ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ, ಶೈಲೇಶ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಮಧುಸೂದನ್ ಆಚಾರ್ಯ, ಬಿಜೆಪಿ ಪ್ರಮುಖರಾದ ರವಿವರ್ಮ ಶೆಟ್ಟಿ, ಮುರಳಿಧರ್ ಪೈ ಹಾಗೂ ಕೊಳ್ಯೂರು ರಾಮಚಂದ್ರ ರಾವ್ ಅವರ ಧರ್ಮಪತ್ನಿ, ಮಕ್ಕಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next