Advertisement

ವಿಟ್ಲ ಯಕ್ಷ ಸಿಂಧೂರ ಪ್ರತಿಷ್ಠಾನ: ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

02:35 AM Jul 08, 2017 | Karthik A |

ವಿಟ್ಲ: ವಿಟ್ಲ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ವಿಠಲ ವಿದ್ಯಾಸಂಘದ ಆಶ್ರಯದಲ್ಲಿ ವಿಠಲ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಬೇತಿಯನ್ನು ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್‌ ಉದ್ಘಾಟಿಸಿದರು.

Advertisement

ವಿಶ್ವೇಶ್ವರ ಭಟ್‌ ಅವರು ಮಾತನಾಡಿ, ಎಳವೆಯಲ್ಲಿಯೇ ಯಕ್ಷಗಾನ ಕಲೆಯನ್ನು ವಿದ್ಯಾಭ್ಯಾಸದೊಂದಿಗೆ ಬಿಡುವಿನ ಸಮಯದಲ್ಲಿ ಕಲಿತು ನೈಪುಣ್ಯ ಸಾಧಿಸುವಂತಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ವಿಠಲ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕಿರಣ್‌ ಕುಮಾರ್‌ ಬ್ರಹ್ಮಾವರ ಅವರು ಮಾತನಾಡಿ, ಸಾಹಿತ್ಯ, ಸಂಗೀತ, ನಾಟ್ಯ, ಅಭಿನಯ ಇವೆಲ್ಲವುಗಳಿಂದ ಕೂಡಿದ ಯಕ್ಷಗಾನವು ಸರ್ವಸಂಪನ್ನ ಕಲೆಯಾಗಿದೆ ಎಂದರು.

ಪ್ರತಿಷ್ಠಾನದ ಸಂಚಾಲಕ ಚಣಿಲ ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ಶುಕ್ರವಾರ ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಹಿಮ್ಮೇಳ ತರಬೇತಿ ಮತ್ತು ಪ್ರತೀ ಶನಿವಾರ ಕರ್ಗಲ್ಲು ವಿಶ್ವೇಶ್ವರ ಭಟ್‌ ಮುಮ್ಮೇಳ ತರಬೇತಿ ನೀಡಲಿದ್ದಾರೆ ಎಂದರು. ಅನುಷಾ, ನಿಧಿ ಮತ್ತು ಹೀನಾ ಆಶಯಗೀತೆ ಹಾಡಿದರು. ಶಿಕ್ಷಕ ರಮೇಶ್‌ ಬಿ.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಚಂದ್ರಕಲಾ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next