Advertisement

ನ್ಯಾಯಾಧೀಶರಿಂದ ಕೋವಿಡ್ ಜಾಗೃತಿ

03:21 PM Apr 16, 2020 | Naveen |

ಯಲಬುರ್ಗಾ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುವ ರೋಗಿಗಳಿಗೆ ವೈದ್ಯರು ಸರಿಯಾಗಿ ಸ್ಪಂದಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಶುಭ ಹೇಳಿದರು.

Advertisement

ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್   ವೈರಸ್‌ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ಕೆ ಆರೋಗ್ಯ ಇಲಾಖೆ ಮುಂದಾಗಬೇಕು. ವೈದ್ಯರು ಮಾಸ್ಕ್ ಸೇರಿದಂತೆ ವಿಶೇಷವಾಗಿ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಲಾಕ್‌ಡೌನ್‌ ಅನ್ನು ಪಾಲಿಸಬೇಕು ಮನೆಯಿಂದ ಯಾರೂ ಹೊರಗಡೆ ಬರಬಾರದು. ಮಹಾಮಾರಿ ಕೊರೊನಾ ನಿರ್ಮೂಲನೆಗೆ ತಾಲೂಕಾಡಳಿತಕ್ಕೆ ಸಹಕಾರ ನೀಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದರು. ಸಿವಿಲ್‌ ನ್ಯಾಯಾಧೀಶರಾದ ಶ್ರೀಶೈಲ ಬಾಗಡೆ, ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ಡಾ| ವಿವೇಕ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next