Advertisement

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

02:28 PM Oct 19, 2021 | Team Udayavani |

ಯಳಂದೂರು: ಪಟ್ಟಣದ ಬಸ್ ನಿಲ್ದಾಣದಲ್ಲಿ  ಪಾದಾಚಾರಿಯೊಬ್ಬರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

Advertisement

ತಾಲ್ಲೂಕಿನ ಯರಗಂಬಳ್ಳಿ ಗ್ರಾಮದ ಮರಿಸ್ವಾಮಿ(45) ವ್ಯಕ್ತಿ ಮೃತಪಟ್ಟ ದುರ್ದೈವಿ. ಕೆಲಸದ ನಿಮಿತ್ತ  ಪಟ್ಟಣಕ್ಕೆ ಬಂದು ಬಸ್ ನಿಲ್ದಾಣದ ಬಳಿಯ ಹೋಟೆಲ್ ನಲ್ಲಿ ತಿಂಡಿಯನ್ನು ತಿಂದು ವಾಪಸ್ಸಾಗುತ್ತಿದ್ದ ವೇಳೆ ಚಾಮರಾಜನಗರದ ಕಡೆಯಿಂದ ಬಂದ ಲಾರಿ ಡಿಕ್ಕಿಹೊಡೆದಿದೆ.

ಇದನ್ನೂ ಓದಿ:ಆರ್ ಎಸ್ಎಸ್ ಏನು ಮಾಡುತ್ತಿದೆ ಎಂದು ತಿಳಿಯಲು ಎಚ್ ಡಿಕೆ ಶಾಖೆಗೆ ಬರಲಿ: ನಳಿನ್ ಕಟೀಲ್

ಕೆಳಕ್ಕೆ ಬಿದ್ದ ಇವರ ತಲೆಯ ಮೇಲೆ ಹಿಂಬದಿಯ ಚಕ್ರ ಹರಿದಿದ್ದು  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಯಳಂದೂರು ಪಟ್ಟಣ ಪೋಲಿಸರು ಭೇಟಿ ನೀಡಿ ಲಾರಿಯನ್ನು  ವಶಪಡಿಸಿಕೊಂಡು ಮುಂದಿನ ಕ್ರಮವನ್ನು ವಹಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next