Advertisement

ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

09:30 PM Apr 05, 2024 | Team Udayavani |

ಯಳಂದೂರು: ಪಟ್ಟಣದ ಗೌರಶ್ವರ ದೇಗುಲದ ಮುಂಭಾಗ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ಪೊಲೀಸರು ವಶಪಡಿಸಿರುವ ಘಟನೆ ಗುರುವಾರ ನಡೆದಿದೆ.

Advertisement

ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ತತ್ ಕ್ಷಣ ಪಲ್ಸರ್ ಬೈಕ್ ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ. ಬೈಕ್ ಸೇರಿದಂತೆ 1.13 ಲಕ್ಷ ರೂ ಮೊತ್ತದ ವಸ್ತುಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಸುರೇಶ ಕುಮಟೆ, ಪೇದೆಗಳಾದ ಲೋಕೇಶ್, ಯಶೋಧ ಹಾಗೂ ಗೃಹರಕ್ಷಕ ದಳದ ಸಿಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next