Advertisement

ಯಲ್ಲಾಪುರ: ಸುಟ್ಟು ಕರಕಲಾದ ಸರಕು ತುಂಬಿದ್ದ ಲಾರಿ

09:25 AM Jul 29, 2022 | Team Udayavani |

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸರಕು ತುಂಬಿದ ಲಾರಿಯೊಂದಕ್ಕೆ ಬೆಂಕಿ ತಾಗಿ ಲಾರಿ ಹೊತ್ತಿ ಉರಿದ ಘಟನೆ ಶುಕ್ರವಾರ ಬೆಳಿಗ್ಗೆ 7.30 ಸುಮಾರಿಗೆ ನಡೆದಿದೆ.

Advertisement

ಸಿಮೆಂಟ್ ತುಂಬಿದ ಲಾರಿ ಇದಾಗಿದ್ದು ಲಾರಿಯ ಲೈನರ್ ಹೀಟ್ ಆಗಿ ಬೆಂಕಿ ಕಾಣಿಸಿಕೊಂಡು ಬೆಂಕಿ ಉರಿಯಿತು. ನಂತರ ಅಗ್ನಿಶಾಮಕದವರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ಆರಿಸಿದ್ದಾರೆ. ಲಾರಿಯ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಅದರಲ್ಲಿದ್ದ ಸಿಮೆಂಟಿಗೂ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ:ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು: ಸಿದ್ದರಾಮಯ್ಯ ಎಚ್ಚರಿಕೆ

ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೀತಿಯಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಅಗ್ನಿಶಾಮಕದ ಸಿಬ್ಬಂದಿಗಳು, ಹೆದ್ದಾರಿ ಇಲಾಖೆಯ ಮುರುಗೇಶ ಶೆಟ್ಟಿ ಸ್ಥಳದಲ್ಲಿದ್ದು ಸಂಚಾರಕ್ಕೆ ಸಹಕರಿಸಿದರು

Advertisement

Udayavani is now on Telegram. Click here to join our channel and stay updated with the latest news.

Next